23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್ ಡಿಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

ಉಜಿರೆ : “ಮಕ್ಕಳ ಸಮಸ್ಯೆಗಳ ಅರಿವಿರುವುದು ಪೋಷಕರಿಗೆ ಮುಖ್ಯ ಹಾಗೆಯೇ ವಯಸ್ಸಿಗೆ ತಕ್ಕಂತೆ ಪೋಷಕರಾದವರು ಮಕ್ಕಳನ್ನು ಅರ್ಥೈಸಿಕೊಂಡು ಸಿದ್ಧಾಂತಗಳೊಂದಿಗೆ ಮಗುವನ್ನು ಬೆಳೆಸುವುದು ಅಗತ್ಯ” ಎಂದು ಎಸ್. ಡಿ. ಎಮ್ ಸ್ನಾತಕೋತ್ತರ ಪದವಿ ಎಮ್.ಎಸ್.ಡಬ್ಲ್ಯೂ ವಿಭಾಗದ ಉಪನ್ಯಾಸಕಿ ಡಾ. ಧನೇಶ್ವರಿ ಇವರು ಹೇಳಿದರು.

ಇವರು ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ. ಬಿ. ಎಸ್. ಇ), ಉಜಿರೆಯಲ್ಲಿ ಜೂ.14 ರಂದು ನಡೆದ 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ “ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರ” ಎಂಬ ವಿಷಯದ ಕುರಿತು ಮಾತನಾಡಿದರು.

ಶಾಲಾ ಶಿಕ್ಷಕಿ ಶಾಂಟಿ ಜಾರ್ಜ್ ಇವರು ಶಾಲಾ ವಾರ್ಷಿಕ ವರದಿ ವಾಚನ ಮಾಡಿದರು. ವಿಷಯವಾರು ಶಿಕ್ಷಕರು ತಮ್ಮ ಪರಿಚಯದೊಂದಿಗೆ ತಾವು ಬೋಧಿಸುವ ವಿಷಯದ ಕುರಿತು ಪೋಷಕರಿಗೆ ತಿಳಿಸಿದರು.

ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಮನ್ಮೋಹನ್ ನಾಯಕ್ ಇವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕರು ಸ್ವಾಗತಿಸಿ, ಶಿಕ್ಷಕಿ ಸವಿತ ವೇದಪ್ರಕಾಶ್ ನಿರೂಪಣೆ ಮತ್ತು ವಂದಿಸಿದರು.

Related posts

ಮೇಲಂತಬೆಟ್ಟು: ಬೈಕ್ ಗಳೆರಡು ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ

Suddi Udaya

ವೇದ ವಿದ್ವಾಂಸರಾದ ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು “ಹವ್ಯಕ ವೇದ ರತ್ನ” ಪ್ರಶಸ್ತಿಗೆ ಆಯ್ಕೆ

Suddi Udaya

ಉಜಿರೆ: ಹಳೆಪೇಟೆ ಎಸ್.ಡಿ.ಟಿ.ಯು ಆಟೋ ಯೂನಿಯನ್ ವಾರ್ಷಿಕ ಮಹಾಸಭೆ

Suddi Udaya

ನಯನಾಡು ಸರಕಾರಿ ಪ್ರೌಢಶಾಲೆಗೆ ರೂ. 3.50 ಲಕ್ಷ ಮೌಲ್ಯದ ಪರಿಕರಗಳ ಕೊಡುಗೆ

Suddi Udaya

ಅಳದಂಗಡಿ ಗ್ರಾ. ಪಂ. ನಲ್ಲಿ ಸಾಮಾಜಿಕ ಪರಿಶೋದನಾ ವಿಶೇಷ ಗ್ರಾಮ ಸಭೆ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya
error: Content is protected !!