22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್ ಡಿಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

ಉಜಿರೆ : “ಮಕ್ಕಳ ಸಮಸ್ಯೆಗಳ ಅರಿವಿರುವುದು ಪೋಷಕರಿಗೆ ಮುಖ್ಯ ಹಾಗೆಯೇ ವಯಸ್ಸಿಗೆ ತಕ್ಕಂತೆ ಪೋಷಕರಾದವರು ಮಕ್ಕಳನ್ನು ಅರ್ಥೈಸಿಕೊಂಡು ಸಿದ್ಧಾಂತಗಳೊಂದಿಗೆ ಮಗುವನ್ನು ಬೆಳೆಸುವುದು ಅಗತ್ಯ” ಎಂದು ಎಸ್. ಡಿ. ಎಮ್ ಸ್ನಾತಕೋತ್ತರ ಪದವಿ ಎಮ್.ಎಸ್.ಡಬ್ಲ್ಯೂ ವಿಭಾಗದ ಉಪನ್ಯಾಸಕಿ ಡಾ. ಧನೇಶ್ವರಿ ಇವರು ಹೇಳಿದರು.

ಇವರು ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ. ಬಿ. ಎಸ್. ಇ), ಉಜಿರೆಯಲ್ಲಿ ಜೂ.14 ರಂದು ನಡೆದ 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ “ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರ” ಎಂಬ ವಿಷಯದ ಕುರಿತು ಮಾತನಾಡಿದರು.

ಶಾಲಾ ಶಿಕ್ಷಕಿ ಶಾಂಟಿ ಜಾರ್ಜ್ ಇವರು ಶಾಲಾ ವಾರ್ಷಿಕ ವರದಿ ವಾಚನ ಮಾಡಿದರು. ವಿಷಯವಾರು ಶಿಕ್ಷಕರು ತಮ್ಮ ಪರಿಚಯದೊಂದಿಗೆ ತಾವು ಬೋಧಿಸುವ ವಿಷಯದ ಕುರಿತು ಪೋಷಕರಿಗೆ ತಿಳಿಸಿದರು.

ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಮನ್ಮೋಹನ್ ನಾಯಕ್ ಇವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕರು ಸ್ವಾಗತಿಸಿ, ಶಿಕ್ಷಕಿ ಸವಿತ ವೇದಪ್ರಕಾಶ್ ನಿರೂಪಣೆ ಮತ್ತು ವಂದಿಸಿದರು.

Related posts

ಬೆಳಾಲು ಎಸ್.ಡಿ.ಎಮ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಾನಂದ ರಾವ್ ರವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ರತ್ನ ಪ್ರಶಸ್ತಿ

Suddi Udaya

ಅಳದಂಗಡಿ: ನಿವೃತ್ತ ಶಿಕ್ಷಕ ಅಶೋಕ್ ರಾವ್ ನಿಧನ

Suddi Udaya

ಸಮಾಜ ಸೇವಕ ಅಜೇಯ್ ಜೇಕಬ್ ಮಟ್ಲರವರ ನೇತೃತ್ವದಲ್ಲಿ ಹಲವು ಮಂದಿ ಬಿಜೆಪಿಗೆ ಸೇರ್ಪಡೆ

Suddi Udaya

ಶ್ರೀ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ಹಾಲಿ ವ್ಯವಸ್ಥಪನಾ ಸಮಿತಿ ರದ್ದು ಹಿನ್ನಲೆ; ಹೊಸ ಹಣಕಾಸಿನ ವ್ಯವಹಾರ ನಡೆಸದಂತೆ ನ್ಯಾಯಾಲಯ ಆದೇಶ

Suddi Udaya

ಬೆಳ್ತಂಗಡಿಯಲ್ಲಿ ಯುವವಾಹಿನಿಯಿಂದ “ಡೆನ್ನಾನ ಡೆನ್ನನ” ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ

Suddi Udaya

ಅರಸಿನಮಕ್ಕಿ: ಚೈತನ್ಯಮಿತ್ರ ಕಲಾವೃಂದದಿಂದ 22ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya
error: Content is protected !!