July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿ

ಕೋಳಿ ತ್ಯಾಜ್ಯದಿಂದ ಅಶುದ್ಧಿಯಾಗುತ್ತಿರುವ ಶಿಶಿಲದ‌ ” ಕಪಿಲೆ”

ಬೆಳ್ತಂಗಡಿ ತಾಲೂಕಿನ ಶಿಶಿಲ ಅತ್ಯಂತ ಪರಿಸರ ಸೂಕ್ಷ್ಮ ಪ್ರದೇಶ. ಇಲ್ಲಿರುವ ಕಪಿಲಾ ನದಿ ನಿತ್ಯ ಹರಿದ್ವರ್ಣ ಪ್ರದೇಶದಿಂದ ಹರಿಯುತ್ತಿದ್ದಾಳೆ, ಸಾವಿರಾರು ಮತ್ಸ್ಯ ದೇವರ ಮೀನುಗಳಿಗೆ ಆಶ್ರಯ ನೀಡುತ್ತಿದ್ದಾಳೆ.
ಕಪಿಲಾ ನದಿಯ ತಟದಲ್ಲಿ ಪ್ರಖ್ಯಾತ ಶಿಶಿಲೇಶ್ವರ ದೇವಾಲಯ ಇದೆ. ಇಲ್ಲಿಯ ಜಲದಿಂದಲೆ ದೇವರಿಗೆ ‌ನಿತ್ಯ ಅಭಿಷೇಕ ನಡೆಯುತ್ತಿದೆ. ಸಾವಿರಾರು ಭಕ್ತರು ಈ ನೀರನ್ನು ತೀರ್ಥವೆಂದು ಕುಡಿಯುತ್ತಿದ್ದಾರೆ.

ಅಲ್ಲದೆ ಶಿಶಿಲ ಪಕ್ಕದ ಗ್ರಾಮದ ಗ್ರಾಮಸ್ಥರು ಈ ನದಿಯನೆ ಅವಲಂಬಿಸಿರುತ್ತಾರೆ. (ಕುಡಿಯಲು ಉಪಯೋಗಿಸುತ್ತಾರೆ) ಈ ನೀರು ಕೃಷಿ, ಕುಡಿಯಲು ನಿತ್ಯ ಬಳಸುತ್ತಿದ್ದಾರೆ.

ಇಂತಹ ಪ್ರದೇಶದಲ್ಲಿ ಈ ನದಿಗೆ ದಿನ ನಿತ್ಯ ಕೋಳಿ ತ್ಯಾಜ್ಯವನ್ನು ಸುರಿಯುತ್ತಿರುವುದು ಪರಿಸರ ಪ್ರಿಯರಿಗೆ ಆತಂಕವಾಗಿದೆ. ಇದರಿಂದ ಸುತ್ತ ಮುತ್ತಲಿನ‌ ಪ್ರದೇಶದಲ್ಲಿ ದುರ್ಗಂಧದ ವಾಸನೆ ಹೊರಹೊಮ್ಮಿ ವಾತಾವರಣ ಹಾಳಾಗುತ್ತಿದೆ.

ಆದುದರಿಂದ ಸಂಭವಿಸಿದ ಅಧಿಕಾರಿಗಳು, ಗ್ರಾಮ ಪಂಚಾಯತ್ , ತಾಲೂಕು ಆಡಳಿತ ಕೂಡಲೆ ಮದ್ಯ ಪ್ರವೇಶಿಸಿ ಅಂತಹ ವ್ಯಕ್ತಿಗಳ ಸೂಕ್ತ‌ ಕಾನೂನು ಕ್ರಮ ಜರಗಿಸುವಂತೆ ಶಿಶಿಲದ ಪ್ರಜ್ನಾವಂತ ಪರಿಸರ ಪ್ರೇಮಿಗಳು ನಾಗರಿಕರು ಒತ್ತಾಯಿಸಿದ್ದಾರೆ.

Related posts

ನಾಳೆಯಿಂದ ಗಡಾಯಿಕಲ್ಲು ಪ್ರವೇಶ ನಿಷೇಧ

Suddi Udaya

ಮುಖ್ಯೋಪಾಧ್ಯಾಯರಾಗಿ ಬಡ್ತಿ ಪಡೆದು ಪೆರ್ಲ ಬೈಪಾಡಿ ಶಾಲೆಗೆ ವರ್ಗಾವಣೆಗೊಂಡ ಬಜಿಲ ಸ. ಶಾಲೆಯ ಶಿಕ್ಷಕಿ ಜಯಶ್ರೀ ಕೆ ಇವರಿಗೆ ಪೋಷಕರಿಂದ ಬೀಳ್ಕೊಡುಗೆ, ಕಂಪ್ಯೂಟರ್ ಹಸ್ತಾಂತರ

Suddi Udaya

ಬೆಳ್ತಂಗಡಿ ಮಾಳವ ಯಾನೆ ಮಲ್ಲವರ ಯುವಕ ಸಂಘದ 28ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಪೊಲೀಯೋ ಲಸಿಕಾ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭೀಷೇಕ ‘ಶ್ರೀಮುಖ ಪತ್ರಿಕೆ’ ಬಿಡುಗಡೆ

Suddi Udaya

ಉಜಿರೆ: ಲಕ್ಷ್ಮಣ ಗೋರೆ ನಿಧನ

Suddi Udaya
error: Content is protected !!