25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿ

ಕೋಳಿ ತ್ಯಾಜ್ಯದಿಂದ ಅಶುದ್ಧಿಯಾಗುತ್ತಿರುವ ಶಿಶಿಲದ‌ ” ಕಪಿಲೆ”

ಬೆಳ್ತಂಗಡಿ ತಾಲೂಕಿನ ಶಿಶಿಲ ಅತ್ಯಂತ ಪರಿಸರ ಸೂಕ್ಷ್ಮ ಪ್ರದೇಶ. ಇಲ್ಲಿರುವ ಕಪಿಲಾ ನದಿ ನಿತ್ಯ ಹರಿದ್ವರ್ಣ ಪ್ರದೇಶದಿಂದ ಹರಿಯುತ್ತಿದ್ದಾಳೆ, ಸಾವಿರಾರು ಮತ್ಸ್ಯ ದೇವರ ಮೀನುಗಳಿಗೆ ಆಶ್ರಯ ನೀಡುತ್ತಿದ್ದಾಳೆ.
ಕಪಿಲಾ ನದಿಯ ತಟದಲ್ಲಿ ಪ್ರಖ್ಯಾತ ಶಿಶಿಲೇಶ್ವರ ದೇವಾಲಯ ಇದೆ. ಇಲ್ಲಿಯ ಜಲದಿಂದಲೆ ದೇವರಿಗೆ ‌ನಿತ್ಯ ಅಭಿಷೇಕ ನಡೆಯುತ್ತಿದೆ. ಸಾವಿರಾರು ಭಕ್ತರು ಈ ನೀರನ್ನು ತೀರ್ಥವೆಂದು ಕುಡಿಯುತ್ತಿದ್ದಾರೆ.

ಅಲ್ಲದೆ ಶಿಶಿಲ ಪಕ್ಕದ ಗ್ರಾಮದ ಗ್ರಾಮಸ್ಥರು ಈ ನದಿಯನೆ ಅವಲಂಬಿಸಿರುತ್ತಾರೆ. (ಕುಡಿಯಲು ಉಪಯೋಗಿಸುತ್ತಾರೆ) ಈ ನೀರು ಕೃಷಿ, ಕುಡಿಯಲು ನಿತ್ಯ ಬಳಸುತ್ತಿದ್ದಾರೆ.

ಇಂತಹ ಪ್ರದೇಶದಲ್ಲಿ ಈ ನದಿಗೆ ದಿನ ನಿತ್ಯ ಕೋಳಿ ತ್ಯಾಜ್ಯವನ್ನು ಸುರಿಯುತ್ತಿರುವುದು ಪರಿಸರ ಪ್ರಿಯರಿಗೆ ಆತಂಕವಾಗಿದೆ. ಇದರಿಂದ ಸುತ್ತ ಮುತ್ತಲಿನ‌ ಪ್ರದೇಶದಲ್ಲಿ ದುರ್ಗಂಧದ ವಾಸನೆ ಹೊರಹೊಮ್ಮಿ ವಾತಾವರಣ ಹಾಳಾಗುತ್ತಿದೆ.

ಆದುದರಿಂದ ಸಂಭವಿಸಿದ ಅಧಿಕಾರಿಗಳು, ಗ್ರಾಮ ಪಂಚಾಯತ್ , ತಾಲೂಕು ಆಡಳಿತ ಕೂಡಲೆ ಮದ್ಯ ಪ್ರವೇಶಿಸಿ ಅಂತಹ ವ್ಯಕ್ತಿಗಳ ಸೂಕ್ತ‌ ಕಾನೂನು ಕ್ರಮ ಜರಗಿಸುವಂತೆ ಶಿಶಿಲದ ಪ್ರಜ್ನಾವಂತ ಪರಿಸರ ಪ್ರೇಮಿಗಳು ನಾಗರಿಕರು ಒತ್ತಾಯಿಸಿದ್ದಾರೆ.

Related posts

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಯಲ್ಲಿ ನಾಗರಿಕ ಹಕ್ಕುಗಳು ಮತ್ತು ಕರ್ತವ್ಯಗಳ ಮಾಹಿತಿ ಕಾರ್ಯಾಗಾರ

Suddi Udaya

ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕದ ಉದ್ಘಾಟನಾ ಸಮಾರಂಭ

Suddi Udaya

ಕೊಡಿಯಾಲಬೈಲು ಸ.ಹಿ.ಪ್ರಾ. ಶಾಲೆಯಲ್ಲಿ ಕೈ ತೊಳೆಯುವ ನೀರಿನ ಘಟಕ ಉದ್ಘಾಟನೆ

Suddi Udaya

ಬೆಳ್ತಂಗಡಿ ಕಾಶಿಬೆಟ್ಟು ಬಳಿ ಮೋರಿಗೆ ಬಿದ್ದ ಕಾರು

Suddi Udaya
error: Content is protected !!