23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿ

ಕೋಳಿ ತ್ಯಾಜ್ಯದಿಂದ ಅಶುದ್ಧಿಯಾಗುತ್ತಿರುವ ಶಿಶಿಲದ‌ ” ಕಪಿಲೆ”

ಬೆಳ್ತಂಗಡಿ ತಾಲೂಕಿನ ಶಿಶಿಲ ಅತ್ಯಂತ ಪರಿಸರ ಸೂಕ್ಷ್ಮ ಪ್ರದೇಶ. ಇಲ್ಲಿರುವ ಕಪಿಲಾ ನದಿ ನಿತ್ಯ ಹರಿದ್ವರ್ಣ ಪ್ರದೇಶದಿಂದ ಹರಿಯುತ್ತಿದ್ದಾಳೆ, ಸಾವಿರಾರು ಮತ್ಸ್ಯ ದೇವರ ಮೀನುಗಳಿಗೆ ಆಶ್ರಯ ನೀಡುತ್ತಿದ್ದಾಳೆ.
ಕಪಿಲಾ ನದಿಯ ತಟದಲ್ಲಿ ಪ್ರಖ್ಯಾತ ಶಿಶಿಲೇಶ್ವರ ದೇವಾಲಯ ಇದೆ. ಇಲ್ಲಿಯ ಜಲದಿಂದಲೆ ದೇವರಿಗೆ ‌ನಿತ್ಯ ಅಭಿಷೇಕ ನಡೆಯುತ್ತಿದೆ. ಸಾವಿರಾರು ಭಕ್ತರು ಈ ನೀರನ್ನು ತೀರ್ಥವೆಂದು ಕುಡಿಯುತ್ತಿದ್ದಾರೆ.

ಅಲ್ಲದೆ ಶಿಶಿಲ ಪಕ್ಕದ ಗ್ರಾಮದ ಗ್ರಾಮಸ್ಥರು ಈ ನದಿಯನೆ ಅವಲಂಬಿಸಿರುತ್ತಾರೆ. (ಕುಡಿಯಲು ಉಪಯೋಗಿಸುತ್ತಾರೆ) ಈ ನೀರು ಕೃಷಿ, ಕುಡಿಯಲು ನಿತ್ಯ ಬಳಸುತ್ತಿದ್ದಾರೆ.

ಇಂತಹ ಪ್ರದೇಶದಲ್ಲಿ ಈ ನದಿಗೆ ದಿನ ನಿತ್ಯ ಕೋಳಿ ತ್ಯಾಜ್ಯವನ್ನು ಸುರಿಯುತ್ತಿರುವುದು ಪರಿಸರ ಪ್ರಿಯರಿಗೆ ಆತಂಕವಾಗಿದೆ. ಇದರಿಂದ ಸುತ್ತ ಮುತ್ತಲಿನ‌ ಪ್ರದೇಶದಲ್ಲಿ ದುರ್ಗಂಧದ ವಾಸನೆ ಹೊರಹೊಮ್ಮಿ ವಾತಾವರಣ ಹಾಳಾಗುತ್ತಿದೆ.

ಆದುದರಿಂದ ಸಂಭವಿಸಿದ ಅಧಿಕಾರಿಗಳು, ಗ್ರಾಮ ಪಂಚಾಯತ್ , ತಾಲೂಕು ಆಡಳಿತ ಕೂಡಲೆ ಮದ್ಯ ಪ್ರವೇಶಿಸಿ ಅಂತಹ ವ್ಯಕ್ತಿಗಳ ಸೂಕ್ತ‌ ಕಾನೂನು ಕ್ರಮ ಜರಗಿಸುವಂತೆ ಶಿಶಿಲದ ಪ್ರಜ್ನಾವಂತ ಪರಿಸರ ಪ್ರೇಮಿಗಳು ನಾಗರಿಕರು ಒತ್ತಾಯಿಸಿದ್ದಾರೆ.

Related posts

ಗ್ರಾಮೀಣ ಭಾಗದ ಮನ್‌‌ಶರ್ ಕಾಲೇಜ್ ನ ರಾಜ್ಯ ಮಟ್ಟದ ಸಾಧನೆ ಪ್ರಶಂಶನೀಯ; ವಿಧಾನ ಸಭಾಪತಿ ಯು. ಟಿ. ಖಾದರ್

Suddi Udaya

ಪಿಲ್ಯ: ಬಾವಿಗೆ ಬಿದ್ದು ಕಾರ್ಮಿಕ ಸಾವು

Suddi Udaya

ಉಜಿರೆ : ಶ್ರೀ ಧ. ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ಎದುರು ಗಂಟೆ ಮಂಟಪದ ಶಿಲಾನ್ಯಾಸ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವತಿಯಿಂದ 404 ಶಾಲೆಗಳಿಗೆ ಒಟ್ಟು ರೂ. 2.50 ಕೋಟಿ ಮೌಲ್ಯದ 3472 ಜೊತೆ ಡೆಸ್ಕ್-ಬೆಂಚ್‌ಗಳ ವಿತರಣೆ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ತುಮಕೂರು ಜಿಲ್ಲೆಯ ಕ್ಯಾತಸಂದ್ರಲ್ಲಿ ನಡೆದ ಗಣಪತಿ ಶೋಭಯಾತ್ರೆಯಲ್ಲಿ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ತಂಡ

Suddi Udaya
error: Content is protected !!