25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕುತ್ಲೂರು ಸ.ಉ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭ

ಕುತ್ಲೂರು: ಸರಕಾರಿ ಉನ್ನತೀಕರಿಸಿದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭವು ನಡೆಯಿತು.

ಮುರಳಿ ಬಿ ನೋಟರಿ ವಕೀಲರು ಬೆಳ್ತಂಗಡಿ ಇವರು ಬರೆಯುವ ಪುಸ್ತಕ ವಿತರಣೆ ಮಾಡಿ ಸರಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ದೇಶದ ಉನ್ನತ ಹುದ್ದೆಯನ್ನು ಅಲಂಕರಿಸಿರುತ್ತಾರೆ. ನಮ್ಮ ಈ ಶಾಲೆಯ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಿ ದೇಶದ ಉತ್ತಮ ಪ್ರಜೆಗಳಾಗಬೇಕೆಂದು ಶುಭ ಹಾರೈಸಿದರು.

ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ರಾಮಚಂದ್ರ ಭಟ್ ಕುಕ್ಕುಜೆ ಇವರು ಪುಸ್ತಕ ವಿತರಣೆ ಮಾಡಿದ ವಕೀಲರನ್ನು ಅಭಿನಂದಿಸಿದರು.

ವೇದಿಕೆಯಲ್ಲಿ ಕೂತ್ಲೂರು ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಸತೀಶ್ ಪಡಿವಾಳ್, ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಜ್ಯೋತಿ ಶಿವಣ್ಣ ಶೆಟ್ಟಿ, ಗ್ರಾಮ ಪಂಚಾಯಿತಿ ಸದಸ್ಯರಾದ ಸಂತೋಷ್, ಮತ್ತು ಪ್ರೇಮ, ವಕೀಲರ ಧರ್ಮಪತ್ನಿ ಮನೋರಮ ಭಟ್, ಮಕ್ಕಳಾದ ಮಯೂರ ಮತ್ತು ಮಂದಾರ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯರಾದ ಸುಮನಾಜಿ ಸ್ವಾಗತಿಸಿದರು. ಶಿಲ್ಪಾರವರು ಧನ್ಯವಾದವಿತ್ತರು.ಶಾಲಾ ಮಕ್ಕಳ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಜೇಮ್ಸ್ ಪಟ್ಟೇರಿಲ್ ರವರಿಗೆ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದಿಂದ ಗೌರವಾರ್ಪಣೆ

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಭಾರತೀಯ ಸೈನ್ಯದ ಅಭ್ಯುದಯಕ್ಕಾಗಿ ಸೀಯಾಳಭಿಷೇಕದ ಮೂಲಕ ವಿಶೇಷ ಪ್ರಾರ್ಥನೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ: ಎಸ್ ಎಸ್ ಎಲ್ ಸಿ ಸಾಧಕ ಚಿನ್ಮಯಿ ಜಿ.ಕೆ ರವರಿಂದ ಶೈಕ್ಷಣಿಕ ವರ್ಷಕ್ಕೆ ಚಾಲನೆ

Suddi Udaya

ನಿಡಿಗಲ್: ರಾ.ಹೆದ್ದಾರಿಯಲ್ಲಿ ಮೂರು ದಿನದಿಂದ ಅನಾಥವಾಗಿ ನಿಂತ ಬೈಕ್: ವಾರುಸುದಾರನ ಪತ್ತೆಯಿಲ್ಲ ನಾಗರೀಕರಲ್ಲಿ ಸಂಶಯ

Suddi Udaya

ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!