July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಟ್ಟಡೆ: ಕುಂಭಶ್ರೀ ವಿದ್ಯಾಸಂಸ್ಥೆಗೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಭೇಟಿ

ನಿಟ್ಟಡೆ: ಕುಂಭಶ್ರೀ ವಿದ್ಯಾಸಂಸ್ಥೆಗೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಹೆಚ್.ಎಸ್ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಶಂಭುಶಂಕರ್ ಭೇಟಿ ನೀಡಿದರು.

ಸತತ 10ನೇ ಬಾರಿ ಎಸ್ ಎಸ್ ಎಲ್ ಸಿ ಹಾಗೂ 2ನೇ ಬಾರಿ ದ್ವಿತೀಯ ಪಿಯುಸಿಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ್ದು, ಈ ಸಾಧನೆಯನ್ನು ಅಭಿನಂದಿಸುವ ಸಲುವಾಗಿ ಸಂಸ್ಥೆಗೆ ಆಗಮಿಸಿದರು.

100% ಫಲಿತಾಂಶ ಬರುವಲ್ಲಿ ಶ್ರಮ ವಹಿಸಿದ ವಿದ್ಯಾರ್ಥಿಗಳನ್ನು, ಶಾಲಾಮುಖ್ಯ ಶಿಕ್ಷಕಿ- ಶಿಕ್ಷಕರನ್ನು ಹಾಗೂ ಸಂಸ್ಥೆಯ ಮುಖ್ಯಸ್ಥರಿಗೆ ಅಭಿನಂದಿಸಿದರು ಈ ಬಾರಿಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಜೊತೆ ಮಾತನಾಡಿ, ಪರೀಕ್ಷಾ ಸಿದ್ಧತೆಯ ಕುರಿತು ಮಾರ್ಗದರ್ಶನ ನೀಡಿದರು.

ವಿದ್ಯಾರ್ಥಿಗಳಲ್ಲಿರುವ ಶಿಸ್ತು, ನಡವಳಿಕೆ, ಹಾಗೂ ಸಂಸ್ಥೆಯಲ್ಲಿ ಸಿಗುವ ಸಂಸ್ಕಾರಯುತ ಶಿಕ್ಷಣವನ್ನು ಶ್ಲಾಘಿಸಿದರು.

ಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ.ಹೆಚ್, ಕಾರ್ಯನಿರ್ವಹಣಾಧಿಕಾರಿ ಅಶ್ವಿತ್ ಕುಲಾಲ್, ಪ್ರಾಂಶುಪಾಲರು, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಪಂಜ: ವಲಯ ಅರಣ್ಯಾಧಿಕಾರಿಯಾಗಿ ಬೆಳ್ತಂಗಡಿಯ ಶ್ರೀಮತಿ ಸಂಧ್ಯಾ ಅಧಿಕಾರ ಸ್ವೀಕಾರ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ: ವನಮಹೋತ್ಸವ ಹಾಗೂ ಆರೋಗ್ಯ ತರಬೇತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಹದೆಗೆಟ್ಟ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ: ಮತದಾನ ಬಹಿಷ್ಕಾರದ ಎಚ್ಚರಿಕೆ

Suddi Udaya

ಜಿಲ್ಲಾ ಮಟ್ಟದ ಇನ್ಸ್ ಪೈಯರ್ ಸ್ಪರ್ಧೆಗೆ ಉರುವಾಲು ಶ್ರೀ ಭಾರತೀ ವಿದ್ಯಾರ್ಥಿಗಳು ಆಯ್ಕೆ

Suddi Udaya

ಕಕ್ಕಿಂಜೆಯಲ್ಲಿ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆ ಉದ್ಘಾಟನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿನಲ್ಲಿ CSEET ಓರಿಯೆಂಟೇಷನ್ ಕಾರ್ಯಾಗಾರ

Suddi Udaya
error: Content is protected !!