23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ನೀಟ್ ಸಾಧಕ ಆದಿತ್ ಜೈನ್ ಗೆ ಸನ್ಮಾನ

ಗುರುವಾಯನಕೆರೆ: ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ 692 ಅಂಕಗಳೊಂದಿಗೆ ರಾಜ್ಯದಲ್ಲೇ ಅಪೂರ್ವ ಸಾಧಕನಾಗಿ ಗುರುತಿಸಿಕೊಂಡ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆದಿತ್ ಜೈನ್ ಅವರನ್ನು ಕರಾಯದ ಬಳಿಯ ಅವರ ನಿವಾಸ ಬಾವಂತ ಬೆಟ್ಟಿನಲ್ಲಿ ಕಾಲೇಜು ವತಿಯಿಂದ ಸನ್ಮಾನಿಸಲಾಯಿತು.

ವೈದ್ಯಕೀಯ ಶಿಕ್ಷಣಕ್ಕೆ ತೆರಳುವ ಆದಿತ್ ಗೆ ಭಾರತೀಯ ವೈದ್ಯ ಜಗತ್ತಿನ ಅಧಿದೈವ ಧನ್ವಂತರಿ ದೇವರ ಪಂಚ ಲೋಹದ ವಿಗ್ರಹದ ಜೊತೆಗೆ, ಸ್ಟೆತಸ್ಕೋಪ್ , ವೈಟ್ ಕೋಟ್ ಸಹಿತ ಗೌರವಾರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಎಕ್ಸೆಲ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಆಡಳಿತಾಧಿಕಾರಿ ಪುರುಷೋತ್ತಮ್, ನೀಟ್ ಸಂಯೋಜಕ ಶ್ರೀನಿಧಿ ಶೆಟ್ಟಿ, ಗಣಕ ವಿಜ್ಞಾನ ವಿಭಾಗ ಮುಖ್ಯಸ್ಥ ಮೊಹಮ್ಮದ್ ಯೂನಸ್ ಅಲ್ಲಿಬಾಯ್, ಆದಿತ್ ಅವರ ಅಜ್ಜ ನಿರಂಜನ ಜೈನ್ ಬಾವಂತ ಬೆಟ್ಟು, ತಾಯಿ ಪವಿತ್ರ ಜೈನ್, ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

Suddi Udaya

ಉಜಿರೆ: ಅಜಿತ್ ನಗರ ನಿವಾಸಿ ವಿಲ್ಫ್ರೆಡ್ ಡಿಸೋಜಾ ನಿಧನ

Suddi Udaya

ಡಾ. ಯು.ಸಿ. ಪೌಲೋಸ್‌ರವರ ಸೇವೆಗೆ “ಭಾರತದ ಜವಾಬ್ದಾರಿಯುತ ಮತ್ತು ಸಕ್ರಿಯ ನಾಗರಿಕ ಪ್ರಶಸ್ತಿ

Suddi Udaya

4ನೇ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆ ತಂಡಕ್ಕೆ ಹಲವು ಪ್ರಶಸ್ತಿ

Suddi Udaya

ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ

Suddi Udaya

ಕಲ್ಮಂಜ: ಸಂಚಾರಿಸುತ್ತಿರುವಾಗಲೇ ಕಳಚಿ ಬಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಟಯರ್

Suddi Udaya
error: Content is protected !!