30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಟ್ಟಡೆ: ಕುಂಭಶ್ರೀ ವಿದ್ಯಾಸಂಸ್ಥೆಗೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಭೇಟಿ

ನಿಟ್ಟಡೆ: ಕುಂಭಶ್ರೀ ವಿದ್ಯಾಸಂಸ್ಥೆಗೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಹೆಚ್.ಎಸ್ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಶಂಭುಶಂಕರ್ ಭೇಟಿ ನೀಡಿದರು.

ಸತತ 10ನೇ ಬಾರಿ ಎಸ್ ಎಸ್ ಎಲ್ ಸಿ ಹಾಗೂ 2ನೇ ಬಾರಿ ದ್ವಿತೀಯ ಪಿಯುಸಿಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ್ದು, ಈ ಸಾಧನೆಯನ್ನು ಅಭಿನಂದಿಸುವ ಸಲುವಾಗಿ ಸಂಸ್ಥೆಗೆ ಆಗಮಿಸಿದರು.

100% ಫಲಿತಾಂಶ ಬರುವಲ್ಲಿ ಶ್ರಮ ವಹಿಸಿದ ವಿದ್ಯಾರ್ಥಿಗಳನ್ನು, ಶಾಲಾಮುಖ್ಯ ಶಿಕ್ಷಕಿ- ಶಿಕ್ಷಕರನ್ನು ಹಾಗೂ ಸಂಸ್ಥೆಯ ಮುಖ್ಯಸ್ಥರಿಗೆ ಅಭಿನಂದಿಸಿದರು ಈ ಬಾರಿಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಜೊತೆ ಮಾತನಾಡಿ, ಪರೀಕ್ಷಾ ಸಿದ್ಧತೆಯ ಕುರಿತು ಮಾರ್ಗದರ್ಶನ ನೀಡಿದರು.

ವಿದ್ಯಾರ್ಥಿಗಳಲ್ಲಿರುವ ಶಿಸ್ತು, ನಡವಳಿಕೆ, ಹಾಗೂ ಸಂಸ್ಥೆಯಲ್ಲಿ ಸಿಗುವ ಸಂಸ್ಕಾರಯುತ ಶಿಕ್ಷಣವನ್ನು ಶ್ಲಾಘಿಸಿದರು.

ಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ.ಹೆಚ್, ಕಾರ್ಯನಿರ್ವಹಣಾಧಿಕಾರಿ ಅಶ್ವಿತ್ ಕುಲಾಲ್, ಪ್ರಾಂಶುಪಾಲರು, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ: ಕೃಷಿಕ ಮುರಳೀಧರ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಆರೋಗ್ಯದ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ “ಕನಸಿನ ಮನೆ” ಕೆ. ಮೋಹನ್ ಕುಮಾರ್‌ರ ವಿಭಿನ್ನ ಕಲ್ಪನೆಯಲ್ಲಿ ತಲೆಎತ್ತಿ ನಿಂತಿದೆ-ಬ್ರಹ್ಮಕಲಶೋತ್ಸವದಲ್ಲಿ ಮನಸೆಳೆಯುತ್ತಿರುವ “ಸುಪ್ರಸಾದ” ಭೋಜನಾಲಯ

Suddi Udaya

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

Suddi Udaya

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ಕಾರ್ಯಾಚರಣೆ: ನೌಷದ್ ತಂಗಿ, ತಾಯಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಚೈನೈನಿಂದ ಬಂದ ಡಿವೈಎಸ್ಪಿ ವಿಘ್ನೇಶ್ ನೇತೃತ್ವದ ತಂಡ

Suddi Udaya
error: Content is protected !!