April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಪ್ಪಿನಂಗಡಿ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಮಾಹಿತಿ

ಉಪ್ಪಿನಂಗಡಿ:ಭಾರತೀಯ ರಿಸರ್ವ್ ಬ್ಯಾಂಕ್ ನ ವಿವಿಧ ಪರಿಕ್ರಮಗಳ, ಹಣಕಾಸಿನ ವ್ಯವಹಾರದ ಕುರಿತು ಪ್ರಾಯೋಗಿಕ ಮಾಹಿತಿಯನ್ನು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಐಡಿಬಿಐ ಬ್ಯಾಂಕ್ ಚಿಕ್ಕಮಗಳೂರು ಬ್ರಾಂಚ್ ಪ್ರಬಂಧಕಿ ಭವ್ಯ ಜಿ.ಜಿ.ಯವರು ನೀಡಿದರು.

ಅವರು ಉಪ್ಪಿನಂಗಡಿಯ ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಬ್ಯಾಂಕಿಂಗ್ ನ ವಿವಿಧ ಸೇವಾ ವಿಚಾರಗಳ ಬಗ್ಗೆ ಹಾಗೂ ಇನ್ಶುರೆನ್ಸ್ ಮತ್ತು ಈಕ್ವಿಟಿ ಮಾರ್ಕೆಟಿಂಗ್ ಬಗ್ಗೆ ಸವಿಸ್ತಾರವಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಪ್ರೌಢಶಾಲಾ ಅಧ್ಯಾಪಕಿ ಶ್ರೀಮತಿ ವನಲಕ್ಷ್ಮಿ ಎನ್. ಎಚ್ ಅವರು ಸಂಯೋಜಿಸಿದ ಈ ಕಾರ್ಯಕ್ರಮದಲ್ಲಿ ಅಧ್ಯಾಪಕಿ ಶ್ರೀಮತಿ ಬಿ. ಶೋಭಾ ಸ್ವಾಗತಿಸಿದ್ದು, ಶ್ರೀಮತಿ ದೇವಕಿ ಡಿ. ಅವರು ವಂದಿಸಿದರು. ಶ್ರೀಮತಿ ಸುಮಾ ಆರ್. ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಶ್ರೀಧರ ಭಟ್ ಕಾರ್ಯಕ್ರಮ ಸಂಯೋಜನೆಗೆ ಸಹಕರಿಸಿದರು.

Related posts

ನಿವೃತ್ತ ಸೇನಾನಿ ಅನೀಶ್ ಡಿ.ಎಲ್‌ ರವರಿಗೆ ಬೆಳ್ತಂಗಡಿಯಲ್ಲಿ ಅದ್ದೂರಿಯ ಸ್ವಾಗತ

Suddi Udaya

ಅಳದಂಗಡಿ ಆಟೋ ಚಾಲಕ-ಮಾಲಕರ ಸಂಘದ ಅಧ್ಯಕ್ಷರಾಗಿ ಕಿರಣ್ ಶೆಟ್ಟಿ ಆಯ್ಕೆ

Suddi Udaya

‘ಆಸರೆ’ ರುಡ್ ಸೆಟ್ ಯಶಸ್ವಿ ಉದ್ಯಮಿಗಳ ಸಂಘದ ವತಿಯಿಂದ ‘ಆಟಿಡೊಂಜಿ ಕೂಟ’ ಮತ್ತು ಅಭಿನಂದನಾ ಸಮಾರಂಭ

Suddi Udaya

ಬೆಳಾಲು: ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ಗುರಿಪಳ್ಳ -ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ

Suddi Udaya

ಅರಸಿನಮಕ್ಕಿಯಿಂದ ಶಿಶಿಲ ರಸ್ತೆ ಬದಿಯಲ್ಲಿರುವ ಅಪಾಯಕಾರಿ ವಿದ್ಯುತ್ ಕಂಬಗಳ ತೆರವು

Suddi Udaya
error: Content is protected !!