23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಪ್ಪಿನಂಗಡಿ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಮಾಹಿತಿ

ಉಪ್ಪಿನಂಗಡಿ:ಭಾರತೀಯ ರಿಸರ್ವ್ ಬ್ಯಾಂಕ್ ನ ವಿವಿಧ ಪರಿಕ್ರಮಗಳ, ಹಣಕಾಸಿನ ವ್ಯವಹಾರದ ಕುರಿತು ಪ್ರಾಯೋಗಿಕ ಮಾಹಿತಿಯನ್ನು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಐಡಿಬಿಐ ಬ್ಯಾಂಕ್ ಚಿಕ್ಕಮಗಳೂರು ಬ್ರಾಂಚ್ ಪ್ರಬಂಧಕಿ ಭವ್ಯ ಜಿ.ಜಿ.ಯವರು ನೀಡಿದರು.

ಅವರು ಉಪ್ಪಿನಂಗಡಿಯ ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಬ್ಯಾಂಕಿಂಗ್ ನ ವಿವಿಧ ಸೇವಾ ವಿಚಾರಗಳ ಬಗ್ಗೆ ಹಾಗೂ ಇನ್ಶುರೆನ್ಸ್ ಮತ್ತು ಈಕ್ವಿಟಿ ಮಾರ್ಕೆಟಿಂಗ್ ಬಗ್ಗೆ ಸವಿಸ್ತಾರವಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಪ್ರೌಢಶಾಲಾ ಅಧ್ಯಾಪಕಿ ಶ್ರೀಮತಿ ವನಲಕ್ಷ್ಮಿ ಎನ್. ಎಚ್ ಅವರು ಸಂಯೋಜಿಸಿದ ಈ ಕಾರ್ಯಕ್ರಮದಲ್ಲಿ ಅಧ್ಯಾಪಕಿ ಶ್ರೀಮತಿ ಬಿ. ಶೋಭಾ ಸ್ವಾಗತಿಸಿದ್ದು, ಶ್ರೀಮತಿ ದೇವಕಿ ಡಿ. ಅವರು ವಂದಿಸಿದರು. ಶ್ರೀಮತಿ ಸುಮಾ ಆರ್. ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಶ್ರೀಧರ ಭಟ್ ಕಾರ್ಯಕ್ರಮ ಸಂಯೋಜನೆಗೆ ಸಹಕರಿಸಿದರು.

Related posts

ಬೆಳ್ತಂಗಡಿ ವರ್ತಕರ ಸಂಘದ ಸಭೆ: ಮಾ.10 ರಂದು ಜನಸಂಪರ್ಕ ಕಾರ್ಯಕ್ರಮ ಮಾಡಿಸುವುದಾಗಿ ತೀರ್ಮಾನ

Suddi Udaya

ಉಜಿರೆಯಲ್ಲಿ ರೈತ ತರಬೇತಿ ಕಾರ್ಯಕ್ರಮ

Suddi Udaya

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ನೀರು: ಬಂಗಾಡಿ ಸಿಎ ಬ್ಯಾಂಕ್ ಹಾಗೂ ಜೈನ ಬಸದಿ ವತಿಯಿಂದ ಪೈಪ್ ಅಳವಡಿಕೆ: “ಸುದ್ದಿ ಉದಯ ಜನಧ್ವನಿ Effect”

Suddi Udaya

ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ

Suddi Udaya

ಹಾಡುಹಗಲೇ ಚಾರ್ಮಾಡಿ ಘಾಟಿಯಲ್ಲಿ ಸಂಚರಿಸಿ ಆತಂಕ ಸೃಷ್ಟಿದ ಕಾಡಾನೆ: ಬೈಕ್ ಸವಾರ ಅಪಾಯದಿಂದ ಪಾರು

Suddi Udaya

ಗ್ರಾಮಕರಣಿಕ ಮಹೇಶ್ ಗೆ ಜೈಲು ಶಿಕ್ಷೆ

Suddi Udaya
error: Content is protected !!