22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಡ್ಲಾಡಿ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

ಲಾಯಿಲ: ಪಡ್ಲಾಡಿಯ ದ.ಕ.ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಜೂ 16 ರಂದು ಶಾಲೆಯಲ್ಲಿ ಸರಳವಾಗಿ ನಡೆಯಿತು.

ಲಾಯಿಲ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಶಾಲಾ ನಾಮ ನಿರ್ದೇಶನ ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ ಅವರ ಮನವಿಯಂತೆ ಸದಾನಂದ ಶೆಟ್ಟಿ ಕರ್ನೊಡಿ ಹಾಗೂ ಗುತ್ತಿಗೆದಾರರಾದ ಜಗನ್ನಾಥ ಶೆಟ್ಟಿ ಕರ್ನೊಡಿ ಅವರು ಸುಮಾರು 10 ಸಾವಿರ ರೂ ಗಳ ಪುಸ್ತಕ ನೀಡಿದ್ದು.

ಈ ಸಂದರ್ಭದಲ್ಲಿ ಮಾತನಾಡಿದ ಸದಸ್ಯ ಪ್ರಸಾದ್ ಶೆಟ್ಟಿ ಬೆಳ್ತಂಗಡಿ ನಗರಕ್ಕೆ ಅತೀ ಸಮೀಪ ಇರುವ ಲಾಯಿಲ ಗ್ರಾಮದ ಪಡ್ಲಾಡಿ ಶಾಲಾ ಮಕ್ಕಳಿಗೆ ಉತ್ತಮ ಗುಣಮಟ್ಟದ ಪುಸ್ತಕಗಳನ್ನು ನೀಡಬೇಕು. ಖಾಸಗಿ ಶಾಲಾ ಮಕ್ಕಳಂತೆ ನಮ್ಮ ಶಾಲಾ ಮಕ್ಕಳು ಇರಬೇಕು ಎಂಬ ಯೋಚನೆಯೊಂದಿಗೆ ಉತ್ತಮ ಗುಣಮಟ್ಟದ ಪುಸ್ತಕಗಳನ್ನು ಖರೀದಿಸಲು ಸುಮಾರು 10 ಸಾವಿರ ರೂ ಗಳ ಅವಶ್ಯಕತೆ ಇತ್ತು ಈ ಬಗ್ಗೆ ನಮ್ಮ ಗ್ರಾಮದವರೇ ಆದಂತಹ ಸದಾನಂದ ಶೆಟ್ಟಿ ಅವರ ಮಗನಾದ ಪ್ರಶಾಂತ್ ಅವರಲ್ಲಿ ಹಾಗೂ ಗುತ್ತಿಗೆದಾರರಾದ ಜಗನ್ನಾಥ ಶೆಟ್ಟಿ ಕರ್ನೊಡಿ ಅವರಲ್ಲಿ ಮಾಡಿದ ಮನವಿಗೆ ತಕ್ಷಣ ಸ್ಪಂದಿಸಿ ತಲಾ 5 ಸಾವಿರದಂತೆ ನೀಡಿ ಸಹಕಾರ ನೀಡುವ ಮೂಲಕ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಿದ್ದಾರೆ. ಇವರ ಸಹಕಾರಕ್ಕೆ ಧನ್ಯವಾದಗಳು ಎಂದರು.

ಕಾರ್ಯಕ್ರಮದಲ್ಲಿ ಶಾಲಾ ಎಸ್ ಡಿ ಎಂಸಿ ಅಧ್ಯಕ್ಷ ಸೂರಪ್ಪ ಪಡ್ಲಾಡಿ,ಶಾಲಾ ಶಿಕ್ಷಕರು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ರಾಜೇಶ್ವರಿ ಅವರು ಸ್ವಾಗತಿಸಿ ವಂದಿಸಿದರು.

Related posts

ಫೆ.15: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಹೊರಾಂಗಣಕ್ಕೆ ನಾರಾವಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ರೂ.9 ಲಕ್ಷ ವೆಚ್ಚದಲ್ಲಿ ಹಾಸುಕಲ್ಲು ಸಮರ್ಪಣೆ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆ ಗ್ರಾ.ಪಂ. ಅಮೃತ ಸಭಾಂಗಣ ಉದ್ಘಾಟನೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರ

Suddi Udaya

ಮಲವಂತಿಗೆ ವೀರೇಶ್ವರ ಮರಾಠೆ ನಿಧನ

Suddi Udaya

ಸುಲ್ಕೇರಿ ಶ್ರೀ ನೇಮಿನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya
error: Content is protected !!