ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಬೆಳ್ತಂಗಡಿ: ಗೃಹಜ್ಯೋತಿ ಯೋಜನೆಗೆ ಜೂ.18ರಿಂದ ನೋಂದಣಿ

ಬೆಳ್ತಂಗಡಿ: ಗೃಹಜ್ಯೋತಿ ಯೋಜನೆಯಡಿ ಫಲಾನುಭವಿಗಳ ನೋಂದಣಿ ಜೂನ್ 18 ರಿಂದ ಆರಂಭಗೊಳ್ಳಲಿದೆ. ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ಮೂಲಕ ತಮ್ಮ ಹೆಸರು ನೋಂದಾಯಿಸಬಹುದು. ಈ ತಂತ್ರಾಂಶವನ್ನು ಮೊಬೈಲ್, ಕಂಪ್ಯೂಟರ್, ಲ್ಯಾಪ್‍ಟಾಪ್ ಗಳ ಮೂಲಕ ಕೂಡ ಬಳಸಬಹುದಾಗಿದೆ.

ಫಲಾನುಭವಿಗಳ ಆಧಾರ್ ಕಾರ್ಡ್, ಗ್ರಾಹಕರ ಐಡಿಗಳ ಮಾಹಿತಿಯನ್ನು ನೋಂದಣಿ ಸಮಯದಲ್ಲಿ ನೀಡಬೇಕು. ಬೆಂಗಳೂರು ಗ್ರಾಮ ಒನ್ ಮತ್ತು ಕರ್ನಾಟಕ ಒನ್ ಕೇಂದ್ರ ಅಥವಾ ಯಾವುದೇ ವಿದ್ಯುತ್ ಕಚೇರಿಗಳಲ್ಲಿಯೂ ನೋಂದಾಯಿಸಬಹುದು.

ಗೃಹಜ್ಯೋತಿ ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾಗಿದ್ದು, ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್‍ಗಳ ವರೆಗೆ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ ಯೂನಿಟ್ ಗಳ ಮೇಲೆ ಶೇ. 10 ರಷ್ಟು ಹೆಚ್ಚಿನ ಬಳಕೆಯ ಮಿತಿಗೆ ಅರ್ಹರಿರುತ್ತಾರೆ.

ಈ ಯೋಜನೆಯು ಆಗಸ್ಟ್ 1ರಿಂದ ಜಾರಿಗೆ ಬರಲಿದ್ದು, ಅರ್ಹ ಫಲಾನುಭವಿಗಳು ಆಗಸ್ಟ್ 1ರಿಂದ ಶೂನ್ಯ ಬಿಲ್ಲು ಪಡೆಯಲಿದ್ದಾರೆ. ಹೆಚ್ಚಿನ ಮಾಹಿತಿಗೆ ವಿದ್ಯುತ್ ಶಕ್ತಿ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ: 1912 ಅನ್ನು ಸಂಪರ್ಕಿಸಬಹುದು ಎಂದು ಇಂಧನ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಉಜಿರೆ ಅನುಗ್ರಹ ಶಾಲೆಯಲ್ಲಿ “ಸ್ವಭಾವವನ್ನು ಬೆಳೆಸಿ, ಭವಿಷ್ಯವನ್ನು ರೂಪಿಸೋಣ” ವಿಶೇಷ ಕಾರ್ಯಕ್ರಮ

Suddi Udaya

ಜು.30: ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ. ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya

ಬೊಂಟ್ರೋಟ್ಟುಗುತ್ತು: ಪ್ರತಾಪಸಿಂಹ ನಾಯಕ್ ರವರಿಂದ ಹೈಮಾಸ್ಕ್ ದೀಪದ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶ್ರೀ ಕೃಷ್ಣ ಭಜನಾ ಮಂದಿರ ನಿರ್ಮಾಣಕ್ಕೆ ರೂ.1 ಲಕ್ಷ ದೇಣಿಗೆ

Suddi Udaya

ನಕಲಿ ನೋಟು ಅಡ್ಡೆ ಮೇಲೆ ಪೊಲೀಸರ ದಾಳಿ : ಪ್ರಿಂಟಿಂಗ್‌ ಮೆಷಿನ್‌ ಜಪ್ತಿ, 7 ಮಂದಿ ವಶಕ್ಕೆ

Suddi Udaya

ಆ.4: ಬೆಳ್ತಂಗಡಿಯಲ್ಲಿ ಆಧಾರ್‌ ನೋಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya
error: Content is protected !!