22.6 C
ಪುತ್ತೂರು, ಬೆಳ್ತಂಗಡಿ
July 23, 2026
ಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್‌ ಕಾಲೇಜಿಗೆ ಶೇ. 100 ಫಲಿತಾಂಶ

ಉಜಿರೆ: ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ ಬೆಳಗಾವಿ (VTU) ಮೇ 2023 ರಲ್ಲಿ ನಡೆಸಿದ ಅಂತಿಮ ಸೆಮಿಸ್ಟರ್ ಪರೀಕ್ಷೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್‌ ಕಾಲೇಜು ಉಜಿರೆಯ (SDMIT) ಎಲ್ಲಾ ಆರು ವಿಭಾಗಗಳಲ್ಲೂ ಶೇಕಡಾ 100 ಫಲಿತಾಂಶ ದೊರಕಿದ್ದು, ಶೇಕಡಾ 97 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಈ ಶೈಕ್ಷಣಿಕ ವರ್ಷದಲ್ಲಿ ಕ್ಯಾಂಪಸ್ ನೇಮಕಾತಿ ಅತ್ಯುತ್ತಮವಾಗಿ ನಡೆದಿದ್ದು ಈಗಾಗಲೇ ಸುಮಾರು 130 ಕ್ಕೂ ಅಧಿಕ ಪ್ರತಿಷ್ಠಿತ ಕಂಪೆನಿಗಳು ವಿದ್ಯಾರ್ಥಿಗಳಿಗೆ ಸಂದರ್ಶನದ ಅವಕಾಶ ನೀಡಿರುತ್ತದೆ, ಅರ್ಹ ವಿದ್ಯಾರ್ಥಿಗಳಲ್ಲಿ ಶೇಕಡಾ 77 ಕ್ಕೂ ಅಧಿಕ ಕ್ಯಾಂಪಸ್‌ ನೇಮಕಾತಿ ಆಗಿರುತ್ತದೆ. ಇನ್ಫೋರ್ಮೇಶನ್‌ ಸಯನ್ಸ್ ಮತ್ತು ಮೆಕಾನಿಕಲ್ ವಿಭಾಗದಲ್ಲಿ ಎಲ್ಲ (ಶೇಕಡಾ 100) ಅರ್ಹ ವಿದ್ಯಾರ್ಥಿಗಳೂ ನೇಮಕಾತಿ ಹೊಂದಿದ್ದಾರೆ.

ಕಾಲೇಜಿನ ಪ್ರಸ್ತುತ ಶೈಕ್ಷಣಿಕ ಸಾಲಿನ ಆಡಳಿತ ಮಂಡಳಿ ಕೋಟಾದ ಪ್ರವೇಶ ದಾಖಲಾತಿ ಪ್ರಕ್ರಿಯೆ ಆರಂಭವಾಗಿದ್ದು ಅತ್ಯತ್ತಮ ಉತ್ತಮ ಸ್ಪಂದನೆ ದೊರಕಿದೆ. ವಿದ್ಯಾರ್ಥಿಗಳ ಈ ಉತ್ತಮ ಸಾಧನೆಯನ್ನು ಅಧ್ಯಕ್ಷರಾದ ಡಾ. ವೀರೇಂದ್ರ ಹೆಗ್ಗಡೆಯವರು, ಕಾರ್ಯದರ್ಶಿಗಳಾದ ಹರ್ಷೇಂದ್ರ ಕುಮಾರ್ ಮತ್ತು ಡಾ. ಸತೀಶ್ ಚಂದ್ರ, ಪ್ರಾಂಶುಪಾಲರು ಮತ್ತು ಪ್ರಾದ್ಯಾಪಕ ವರ್ಗ ಅಭಿನಂದಿಸಿದ್ದಾರೆ.

Related posts

ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸರಿಗೆ ದೂರು

Suddi Udaya

ಬೆಳ್ತಂಗಡಿ ಪ.ಪಂ. ಆಡಳಿತ ಅಧಿಕಾರಿಯಾಗಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷದ ಕ್ರೀಡಾ ಚಟುವಟಿಕೆಗಳಿಗೆ ಚಾಲನೆ

Suddi Udaya

ಮೈರೋಳ್ತಡ್ಕ ಸ.ಉ. ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ವತಿಯಿಂದ ಶುದ್ಧ ನೀರಿನ ಘಟಕ ಕೊಡುಗೆ

Suddi Udaya

ಮಾಜಿ‌ ಸಚಿವ ಗಂಗಾಧರ ಗೌಡರವರಿಂದ ಹಕ್ಕು ಚಲಾವಣೆ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya
error: Content is protected !!