26.4 C
ಪುತ್ತೂರು, ಬೆಳ್ತಂಗಡಿ
May 24, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿ

ಉಜಿರೆ: ಸೌಜನ್ಯ ಪ್ರಕರಣ: ಆರೋಪಿ ಸಂತೋಷ್ ರಾವ್ ನಿರಪರಾಧಿ ಸಿಬಿಐ ನ್ಯಾಯಾಲಯ ಆದೇಶ

ಬೆಳ್ತಂಗಡಿ: ರಾಷ್ಟ್ರದೆಲ್ಲಡೆ ಸುದ್ದಿಯಾಗಿದ್ದ ಉಜಿರೆ ಖಾಸಗಿ ಕಾಲೇಜು ವಿದ್ಯಾರ್ಥಿನಿ ಸೌಜನ್ಯ(17) ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಹೊಸ ತಿರುವು 11 ವರ್ಷಗಳ ನಂತರ ಸಿಬಿಐ ವಿಶೇಷ ಕೋರ್ಟಿನಿಂದ ತೀರ್ಪು ಪ್ರಕಟಗೊಂಡಿದ್ದು, ಆರೋಪಿ ಸಂತೋಷ್ ರಾವ್ ನಿರಪರಾಧಿಯೆಂದು ಸಿಬಿಐ ನ್ಯಾಯಾಲಯವು ಆದೇಶಿಸಿದೆ. ಇನ್ನೆರಡು ದಿನಗಳಲ್ಲಿ ಮರು ವಿಚಾರಣೆ ನಡೆಸುವಂತೆ ತಿಳಿಸಿದೆ.

ಧರ್ಮಸ್ಥಳ ಪಾಂಗಾಳ ನಿವಾಸಿ ಸೌಜನ್ಯ ಕಾಲೇಜು ಮುಗಿಸಿ ಮನೆಗೆ ಹಿಂದಿರುಗುವಾಗ 9.10.2012ರಂದು ಸಂಜೆ ನಾಪತ್ತೆಯಾಗಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 10.10.2012ರಂದು ಧರ್ಮಸ್ಥಳದ ಮಣ್ಣಸಂಕದಲ್ಲಿ ಶವ ಪತ್ತೆಯಾಗಿದ್ದು, ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಹೌಸಿಂಗ್ ಕಾಲೋನಿಯ ಸಂತೋಷ್ ರಾವ್ ಆರೋಪಿ ಎಂದು ಬಂಧಿಸಲಾಗಿತ್ತು.

ಈ ಬಗ್ಗೆ ರಾಜ್ಯ ಸರಕಾರ ಪ್ರಕರಣವನ್ನು ಸಿಐಡಿಗೆ ತನಿಖೆಗೆ ನೀಡಿದ್ದು, ತಾಲೂಕಿನಲ್ಲಿ ಪ್ರತಿಭಟನೆ ಹೆಚ್ಚಾದಂತೆ ಸರಕಾರ ಮತ್ತೆ ಕೇಂದ್ರ ಸಿಬಿಐ ನಡೆಸಲು ಆದೇಶ ನೀಡಿತ್ತು. ಆರೋಪಿ ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದಿದ್ದ. ಆರೋಪಿ ಸಂತೋಷ್ ರಾವ್ ಬೆಂಗಳೂರು ಸಿಬಿಐ ಕೋರ್ಟ್ ಗೆ ಕಳೆದ ಆರು ಬಾರಿಗೂ ಹೆಚ್ಚು ಹಾಜರಾಗದೆ ತಲೆಮರಿಸಿಕೊಂಡಿದ್ದ. ಹೀಗಾಗಿ ಜೂ.16ರಂದು ಖುದ್ದು ಹಾಜರಾಗಲು ಸಮಸ್ಸ್ ನೀಡಿತ್ತು ಅದರಂತೆ ನ್ಯಾಯಾಲಯಕ್ಕೆ ಹಾಜರಾಗಿದ್ದು ಇದೀಗ ಆರೋಪಿಯು ದೋಷಮುಕ್ತನೆಂದು ನ್ಯಾಯಾಲಯ ಆದೇಶಿಸಿದೆ.

Related posts

ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಗೆ ‘ದ.ಕ ಜಿಲ್ಲಾ ಉತ್ತಮ ಪತ್ತಿನ ಸಹಕಾರಿ ಸಂಘ’ ಪ್ರಶಸ್ತಿ

Suddi Udaya

ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಬೆಳ್ತಂಗಡಿ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಫೆ.12-16: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಕಲ್ಮಂಜ 88 ನೇ ವಾರ್ಡಿನ ಬಿಜೆಪಿ ಪದಾಧಿಕಾರಿಗಳ ಆಯ್ಕೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿಯ 46ನೇ ವರ್ಷದ ಭಜನಾ ಸಪ್ತಾಹ

Suddi Udaya

ಲಾಯಿಲ: ಸುಧೀರ್ ರವರ ಕೋಳಿ ಶೆಡ್ ಗೆ ಮರ ಬಿದ್ದು ಹಾನಿ

Suddi Udaya
error: Content is protected !!