April 7, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿ

ಉಜಿರೆ: ಸೌಜನ್ಯ ಪ್ರಕರಣ: ಆರೋಪಿ ಸಂತೋಷ್ ರಾವ್ ನಿರಪರಾಧಿ ಸಿಬಿಐ ನ್ಯಾಯಾಲಯ ಆದೇಶ

ಬೆಳ್ತಂಗಡಿ: ರಾಷ್ಟ್ರದೆಲ್ಲಡೆ ಸುದ್ದಿಯಾಗಿದ್ದ ಉಜಿರೆ ಖಾಸಗಿ ಕಾಲೇಜು ವಿದ್ಯಾರ್ಥಿನಿ ಸೌಜನ್ಯ(17) ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಹೊಸ ತಿರುವು 11 ವರ್ಷಗಳ ನಂತರ ಸಿಬಿಐ ವಿಶೇಷ ಕೋರ್ಟಿನಿಂದ ತೀರ್ಪು ಪ್ರಕಟಗೊಂಡಿದ್ದು, ಆರೋಪಿ ಸಂತೋಷ್ ರಾವ್ ನಿರಪರಾಧಿಯೆಂದು ಸಿಬಿಐ ನ್ಯಾಯಾಲಯವು ಆದೇಶಿಸಿದೆ. ಇನ್ನೆರಡು ದಿನಗಳಲ್ಲಿ ಮರು ವಿಚಾರಣೆ ನಡೆಸುವಂತೆ ತಿಳಿಸಿದೆ.

ಧರ್ಮಸ್ಥಳ ಪಾಂಗಾಳ ನಿವಾಸಿ ಸೌಜನ್ಯ ಕಾಲೇಜು ಮುಗಿಸಿ ಮನೆಗೆ ಹಿಂದಿರುಗುವಾಗ 9.10.2012ರಂದು ಸಂಜೆ ನಾಪತ್ತೆಯಾಗಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 10.10.2012ರಂದು ಧರ್ಮಸ್ಥಳದ ಮಣ್ಣಸಂಕದಲ್ಲಿ ಶವ ಪತ್ತೆಯಾಗಿದ್ದು, ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಹೌಸಿಂಗ್ ಕಾಲೋನಿಯ ಸಂತೋಷ್ ರಾವ್ ಆರೋಪಿ ಎಂದು ಬಂಧಿಸಲಾಗಿತ್ತು.

ಈ ಬಗ್ಗೆ ರಾಜ್ಯ ಸರಕಾರ ಪ್ರಕರಣವನ್ನು ಸಿಐಡಿಗೆ ತನಿಖೆಗೆ ನೀಡಿದ್ದು, ತಾಲೂಕಿನಲ್ಲಿ ಪ್ರತಿಭಟನೆ ಹೆಚ್ಚಾದಂತೆ ಸರಕಾರ ಮತ್ತೆ ಕೇಂದ್ರ ಸಿಬಿಐ ನಡೆಸಲು ಆದೇಶ ನೀಡಿತ್ತು. ಆರೋಪಿ ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದಿದ್ದ. ಆರೋಪಿ ಸಂತೋಷ್ ರಾವ್ ಬೆಂಗಳೂರು ಸಿಬಿಐ ಕೋರ್ಟ್ ಗೆ ಕಳೆದ ಆರು ಬಾರಿಗೂ ಹೆಚ್ಚು ಹಾಜರಾಗದೆ ತಲೆಮರಿಸಿಕೊಂಡಿದ್ದ. ಹೀಗಾಗಿ ಜೂ.16ರಂದು ಖುದ್ದು ಹಾಜರಾಗಲು ಸಮಸ್ಸ್ ನೀಡಿತ್ತು ಅದರಂತೆ ನ್ಯಾಯಾಲಯಕ್ಕೆ ಹಾಜರಾಗಿದ್ದು ಇದೀಗ ಆರೋಪಿಯು ದೋಷಮುಕ್ತನೆಂದು ನ್ಯಾಯಾಲಯ ಆದೇಶಿಸಿದೆ.

Related posts

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಅಣಬೆ ಬೇಸಾಯ ತರಬೇತಿ ಕಾರ್ಯಾಗಾರ

Suddi Udaya

ಪುಂಜಾಲಕಟ್ಟೆ  ಕರ್ನಾಟಕ ಪಬ್ಲಿಕ್ ಶಾಲೆ : ಶಾಲಾ ಪ್ರಾರಂಭೋತ್ಸವ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ ಪೌಲೋಸ್ ಹಾಗೂ ಕಲ್ಲಡ್ಕ ಪ್ರಭಾಕರ ಭಟ್

Suddi Udaya

ಕೃಷಿ ರಕ್ಷಣೆಗಾಗಿ ಆಯುಧಗಳನ್ನು ಹಿಂಪಡೆಯಲು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶ

Suddi Udaya

ಪೋಕ್ಸೋ ಪ್ರಕರಣ: ಬಿಜೆಪಿ ಎಸ್.ಟಿ. ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಹಾಗೂ ಮೋಹನ್ ರಿಗೆ ಜಾಮೀನು ಮಂಜೂರು

Suddi Udaya

ಭಾರಿ ಮಳೆಗೆ ಅರಸಿನಮಕ್ಕಿಯ ಕಾನದಲ್ಲಿ ಗುಡ್ಡದಿಂದ ರಭಸವಾಗಿ ಬಂದ ನೀರಿನಿಂದ ಮನೆಗೆ ಹಾನಿ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ