22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿ

ಉಜಿರೆ: ಸೌಜನ್ಯ ಪ್ರಕರಣ: ಆರೋಪಿ ಸಂತೋಷ್ ರಾವ್ ನಿರಪರಾಧಿ ಸಿಬಿಐ ನ್ಯಾಯಾಲಯ ಆದೇಶ

ಬೆಳ್ತಂಗಡಿ: ರಾಷ್ಟ್ರದೆಲ್ಲಡೆ ಸುದ್ದಿಯಾಗಿದ್ದ ಉಜಿರೆ ಖಾಸಗಿ ಕಾಲೇಜು ವಿದ್ಯಾರ್ಥಿನಿ ಸೌಜನ್ಯ(17) ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಹೊಸ ತಿರುವು 11 ವರ್ಷಗಳ ನಂತರ ಸಿಬಿಐ ವಿಶೇಷ ಕೋರ್ಟಿನಿಂದ ತೀರ್ಪು ಪ್ರಕಟಗೊಂಡಿದ್ದು, ಆರೋಪಿ ಸಂತೋಷ್ ರಾವ್ ನಿರಪರಾಧಿಯೆಂದು ಸಿಬಿಐ ನ್ಯಾಯಾಲಯವು ಆದೇಶಿಸಿದೆ. ಇನ್ನೆರಡು ದಿನಗಳಲ್ಲಿ ಮರು ವಿಚಾರಣೆ ನಡೆಸುವಂತೆ ತಿಳಿಸಿದೆ.

ಧರ್ಮಸ್ಥಳ ಪಾಂಗಾಳ ನಿವಾಸಿ ಸೌಜನ್ಯ ಕಾಲೇಜು ಮುಗಿಸಿ ಮನೆಗೆ ಹಿಂದಿರುಗುವಾಗ 9.10.2012ರಂದು ಸಂಜೆ ನಾಪತ್ತೆಯಾಗಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 10.10.2012ರಂದು ಧರ್ಮಸ್ಥಳದ ಮಣ್ಣಸಂಕದಲ್ಲಿ ಶವ ಪತ್ತೆಯಾಗಿದ್ದು, ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಹೌಸಿಂಗ್ ಕಾಲೋನಿಯ ಸಂತೋಷ್ ರಾವ್ ಆರೋಪಿ ಎಂದು ಬಂಧಿಸಲಾಗಿತ್ತು.

ಈ ಬಗ್ಗೆ ರಾಜ್ಯ ಸರಕಾರ ಪ್ರಕರಣವನ್ನು ಸಿಐಡಿಗೆ ತನಿಖೆಗೆ ನೀಡಿದ್ದು, ತಾಲೂಕಿನಲ್ಲಿ ಪ್ರತಿಭಟನೆ ಹೆಚ್ಚಾದಂತೆ ಸರಕಾರ ಮತ್ತೆ ಕೇಂದ್ರ ಸಿಬಿಐ ನಡೆಸಲು ಆದೇಶ ನೀಡಿತ್ತು. ಆರೋಪಿ ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದಿದ್ದ. ಆರೋಪಿ ಸಂತೋಷ್ ರಾವ್ ಬೆಂಗಳೂರು ಸಿಬಿಐ ಕೋರ್ಟ್ ಗೆ ಕಳೆದ ಆರು ಬಾರಿಗೂ ಹೆಚ್ಚು ಹಾಜರಾಗದೆ ತಲೆಮರಿಸಿಕೊಂಡಿದ್ದ. ಹೀಗಾಗಿ ಜೂ.16ರಂದು ಖುದ್ದು ಹಾಜರಾಗಲು ಸಮಸ್ಸ್ ನೀಡಿತ್ತು ಅದರಂತೆ ನ್ಯಾಯಾಲಯಕ್ಕೆ ಹಾಜರಾಗಿದ್ದು ಇದೀಗ ಆರೋಪಿಯು ದೋಷಮುಕ್ತನೆಂದು ನ್ಯಾಯಾಲಯ ಆದೇಶಿಸಿದೆ.

Related posts

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಸ್ವ ಸಹಾಯ ಸಂಘಗಳಿಗೆ ಸಾಲ ವಿತರಣಾ ಕಾರ್ಯಕ್ರಮ – ಜನಸುರಕ್ಷಾ ಯೋಜನೆಗಳ ಸಂಪೂರ್ಣತಾ ಅಭಿಯಾನ

Suddi Udaya

ಕಡಿರುದ್ಯಾವರ : ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ

Suddi Udaya

ವೇಣೂರು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ದ.ಕ ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರಾಗಿ ಕೆ.ಎಮ್ ಅಬ್ದುಲ್‌ ಕರೀಮ್ ಹಾಗೂ ಜಯರಾಮ್ ಅಲಂಗಾರು ಆಯ್ಕೆ

Suddi Udaya

ನಾಗಸ್ವರ ವಾದಕ ಸತೀಶ್‌ ಪೂಜಾರಿಗೆ ಅಳದಂಗಡಿ ಅರಸರಿಂದ ಗೌರವ

Suddi Udaya

ಬೆಳ್ತಂಗಡಿ ರೋಟರಿ ಭವನದಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ತರಬೇತಿ

Suddi Udaya
error: Content is protected !!