September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿ

ಉಜಿರೆ: ಸೌಜನ್ಯ ಪ್ರಕರಣ: ಆರೋಪಿ ಸಂತೋಷ್ ರಾವ್ ನಿರಪರಾಧಿ ಸಿಬಿಐ ನ್ಯಾಯಾಲಯ ಆದೇಶ

ಬೆಳ್ತಂಗಡಿ: ರಾಷ್ಟ್ರದೆಲ್ಲಡೆ ಸುದ್ದಿಯಾಗಿದ್ದ ಉಜಿರೆ ಖಾಸಗಿ ಕಾಲೇಜು ವಿದ್ಯಾರ್ಥಿನಿ ಸೌಜನ್ಯ(17) ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಹೊಸ ತಿರುವು 11 ವರ್ಷಗಳ ನಂತರ ಸಿಬಿಐ ವಿಶೇಷ ಕೋರ್ಟಿನಿಂದ ತೀರ್ಪು ಪ್ರಕಟಗೊಂಡಿದ್ದು, ಆರೋಪಿ ಸಂತೋಷ್ ರಾವ್ ನಿರಪರಾಧಿಯೆಂದು ಸಿಬಿಐ ನ್ಯಾಯಾಲಯವು ಆದೇಶಿಸಿದೆ. ಇನ್ನೆರಡು ದಿನಗಳಲ್ಲಿ ಮರು ವಿಚಾರಣೆ ನಡೆಸುವಂತೆ ತಿಳಿಸಿದೆ.

ಧರ್ಮಸ್ಥಳ ಪಾಂಗಾಳ ನಿವಾಸಿ ಸೌಜನ್ಯ ಕಾಲೇಜು ಮುಗಿಸಿ ಮನೆಗೆ ಹಿಂದಿರುಗುವಾಗ 9.10.2012ರಂದು ಸಂಜೆ ನಾಪತ್ತೆಯಾಗಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 10.10.2012ರಂದು ಧರ್ಮಸ್ಥಳದ ಮಣ್ಣಸಂಕದಲ್ಲಿ ಶವ ಪತ್ತೆಯಾಗಿದ್ದು, ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಹೌಸಿಂಗ್ ಕಾಲೋನಿಯ ಸಂತೋಷ್ ರಾವ್ ಆರೋಪಿ ಎಂದು ಬಂಧಿಸಲಾಗಿತ್ತು.

ಈ ಬಗ್ಗೆ ರಾಜ್ಯ ಸರಕಾರ ಪ್ರಕರಣವನ್ನು ಸಿಐಡಿಗೆ ತನಿಖೆಗೆ ನೀಡಿದ್ದು, ತಾಲೂಕಿನಲ್ಲಿ ಪ್ರತಿಭಟನೆ ಹೆಚ್ಚಾದಂತೆ ಸರಕಾರ ಮತ್ತೆ ಕೇಂದ್ರ ಸಿಬಿಐ ನಡೆಸಲು ಆದೇಶ ನೀಡಿತ್ತು. ಆರೋಪಿ ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದಿದ್ದ. ಆರೋಪಿ ಸಂತೋಷ್ ರಾವ್ ಬೆಂಗಳೂರು ಸಿಬಿಐ ಕೋರ್ಟ್ ಗೆ ಕಳೆದ ಆರು ಬಾರಿಗೂ ಹೆಚ್ಚು ಹಾಜರಾಗದೆ ತಲೆಮರಿಸಿಕೊಂಡಿದ್ದ. ಹೀಗಾಗಿ ಜೂ.16ರಂದು ಖುದ್ದು ಹಾಜರಾಗಲು ಸಮಸ್ಸ್ ನೀಡಿತ್ತು ಅದರಂತೆ ನ್ಯಾಯಾಲಯಕ್ಕೆ ಹಾಜರಾಗಿದ್ದು ಇದೀಗ ಆರೋಪಿಯು ದೋಷಮುಕ್ತನೆಂದು ನ್ಯಾಯಾಲಯ ಆದೇಶಿಸಿದೆ.

Related posts

ಉರುವಾಲು: ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಗೆ ಅವಮಾನ, ಸಂವಿಧಾನದ ಮೇಲಿನ ದಾಳಿ: ಸಂತೋಷ್ ಕುಮಾರ್ ಲಾಯಿಲ ಖಂಡನೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಓಟ್ ಚೋರ್ ಗದ್ದಿ ಚೋರ್ ಅಭಿಯಾನ ಹಾಗೂ ಮುಂಡಾಜೆ ಬೂತ್ ಪ್ರಗತಿ ಸಭೆ

Suddi Udaya

ನಾರಾವಿ: ಪರಸ್ಪರ ಯುವಕ ಮಂಡಲ ನೂತನ ಅಧ್ಯಕ್ಷರಾಗಿ ಅಶೋಕ್ ಎಂ.ಕೆ ಹಾಗೂ ಪರಸ್ಪರ ಸೇವಾ ಬ್ರಿಗೇಡಿನ ಅಧ್ಯಕ್ಷರಾಗಿ ಪ್ರವೀಣ್ ದೇವಾಡಿಗ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಅ. ಸೆಕೆಂಡರಿ ಶಾಲೆಯಲ್ಲಿ ಸಂಭ್ರಮದ ‘ಪ್ರಾರಂಭೋತ್ಸವ’

Suddi Udaya
error: Content is protected !!