25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಟ್ಟಡೆ: ಕುಂಭಶ್ರೀ ವಿದ್ಯಾಸಂಸ್ಥೆಗೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಭೇಟಿ

ನಿಟ್ಟಡೆ: ಕುಂಭಶ್ರೀ ವಿದ್ಯಾಸಂಸ್ಥೆಗೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಹೆಚ್.ಎಸ್ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಶಂಭುಶಂಕರ್ ಭೇಟಿ ನೀಡಿದರು.

ಸತತ 10ನೇ ಬಾರಿ ಎಸ್ ಎಸ್ ಎಲ್ ಸಿ ಹಾಗೂ 2ನೇ ಬಾರಿ ದ್ವಿತೀಯ ಪಿಯುಸಿಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ್ದು, ಈ ಸಾಧನೆಯನ್ನು ಅಭಿನಂದಿಸುವ ಸಲುವಾಗಿ ಸಂಸ್ಥೆಗೆ ಆಗಮಿಸಿದರು.

100% ಫಲಿತಾಂಶ ಬರುವಲ್ಲಿ ಶ್ರಮ ವಹಿಸಿದ ವಿದ್ಯಾರ್ಥಿಗಳನ್ನು, ಶಾಲಾಮುಖ್ಯ ಶಿಕ್ಷಕಿ- ಶಿಕ್ಷಕರನ್ನು ಹಾಗೂ ಸಂಸ್ಥೆಯ ಮುಖ್ಯಸ್ಥರಿಗೆ ಅಭಿನಂದಿಸಿದರು ಈ ಬಾರಿಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಜೊತೆ ಮಾತನಾಡಿ, ಪರೀಕ್ಷಾ ಸಿದ್ಧತೆಯ ಕುರಿತು ಮಾರ್ಗದರ್ಶನ ನೀಡಿದರು.

ವಿದ್ಯಾರ್ಥಿಗಳಲ್ಲಿರುವ ಶಿಸ್ತು, ನಡವಳಿಕೆ, ಹಾಗೂ ಸಂಸ್ಥೆಯಲ್ಲಿ ಸಿಗುವ ಸಂಸ್ಕಾರಯುತ ಶಿಕ್ಷಣವನ್ನು ಶ್ಲಾಘಿಸಿದರು.

ಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ.ಹೆಚ್, ಕಾರ್ಯನಿರ್ವಹಣಾಧಿಕಾರಿ ಅಶ್ವಿತ್ ಕುಲಾಲ್, ಪ್ರಾಂಶುಪಾಲರು, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ತಣ್ಣೀರುಪಂತ: ಮುಂದಿಲ ನಿವಾಸಿ ಸೋಮವಾತಿ ನಿಧನ

Suddi Udaya

ಶಿಬಾಜೆ ಯುವಕನಿಗೆ ಜಾತಿನಿಂದನೆ ಕೊಲೆ ಬೆದರಿಕೆ : ಆರೋಪಿಗಳ ಬಂಧನ

Suddi Udaya

ರಾಜ್ಯ ಮಟ್ಟದ ನೆಟ್ ಬಾಲ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ಪುರುಷರ ತಂಡ ಪ್ರಥಮ ಹಾಗೂ ಮಹಿಳೆಯರ ತಂಡ ದ್ವಿತೀಯ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ, ಹೊಸ ಉತ್ಪನ್ನಗಳ ಪರಿಚಯದ ಸ್ಪರ್ಧಾ ಕಾರ್ಯಕ್ರಮ

Suddi Udaya

ಆರಂಬೋಡಿ: ಹನ್ನೆರಡುಕವಲು ರಸ್ತೆ ಅವ್ಯವಸ್ಥೆ, ದುರಸ್ಥಿಗೆ ಗ್ರಾಮಸ್ಥರ ಆಗ್ರಹ, ಗ್ರಾಮ ಪಂಚಾಯತ್ ಗೆ ಮನವಿ

Suddi Udaya

ಬಾರ್ಯ: ಖಾಸಗಿ ಬ್ಯಾಂಕಿನ ಎಟಿಎಂ ನಿಂದ ದರೋಡೆಗೆ ಯತ್ನ

Suddi Udaya
error: Content is protected !!