23.5 C
ಪುತ್ತೂರು, ಬೆಳ್ತಂಗಡಿ
March 7, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿ

ತೋಟತ್ತಾಡಿ : ಯಾಂತ್ರಿಕೃತ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಬೆಳ್ತಂಗಡಿ ತಾಲೂಕಿನ ವತಿಯಿಂದ ಮುದರ ಕುಂಬಾರರ ಮನೆಯಲ್ಲಿ ಯಂತ್ರಶ್ರೀ ಬಗ್ಗೆ ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು.

ಯೋಜನೆಯ ತಾಲೂಕಿನ ಕೃಷಿ-ಅಧಿಕಾರಿಯಾದ ರಾಮ್ ಕುಮಾರ್ ರವರು ಸಾಮಾನ್ಯ ಪದ್ಧತಿ ಮತ್ತು ಯಾಂತ್ರಿಕೃತ ಪದ್ಧತಿಗೆ ಇರುವಂತಹ ವ್ಯತ್ಯಾಸ,ಉತ್ತಮ ಭತ್ತದ ಬೀಜದ ಆಯ್ಕೆ,ಬಿಜೋಪಚಾರ,ಸಸಿ ಮಡಿಗೆ ಮಣ್ಣಿನ ಆಯ್ಕೆ,ಸಸಿ ಮಡಿ ತಯಾರಿ,ನಾಟಿ ಗದ್ದೆಯ ತಯಾರಿ,ಯಂತ್ರದ ಮೂಲಕ ಭತ್ತದ ಸಸಿಯ ನಾಟಿ,ಖರ್ಚು ಮತ್ತು ಆದಾಯದ ಬಗ್ಗೆ ರೈತರೊಂದಿಗೆ ಸಂವಾದದ ಮೂಲಕ ಸಂಪೂರ್ಣವಾದ ಮಾಹಿತಿಯನ್ನು ಪ್ರಾತ್ಯಕ್ಷಿಕೆಯ ಮೂಲಕ ನೀಡಿದರು.

ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ, ಮುದರ ಕುಂಬಾರ ಮತ್ತು ಮೇಲ್ವಿಚಾರಕರಾದ ರಾಜೇಶ್, ಸೇವಾ-ಪ್ರತಿನಿಧಿ ಹಾಗೂ ಭತ್ತ ಕೃಷಿ ಅನುಷ್ಠಾನ ಮಾಡುವ ರೈತರು ಉಪಸ್ಥಿತರಿದ್ದರು. ಯಾಂತ್ರಿಕೃತ ಭತ್ತದ ಬೇಸಾಯ ಮಾಡುವಂತೆ ಆಸಕ್ತ ರೈತರು ಉಪಸ್ಥಿತಿ ಇದ್ದು ಸಂವಾದದ ಮೂಲಕ ಮಾಹಿತಿಯನ್ನು ಪಡೆದುಕೊಂಡರು.

Related posts

ಬಳಂಜ: ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಬೊಂಟ್ರೊಟ್ಟು ಕ್ಷೇತ್ರದಿಂದ ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ

Suddi Udaya

ಅರಸಿನಮಕ್ಕಿ: ಕಾರ್ಗಿಲ್ ಕದನದ 25 ವರ್ಷದ ನೆನಪಿಗಾಗಿ ಪ್ರೌಢ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ಮತ್ತು ಸನ್ಮಾನ ಕಾರ್ಯಕ್ರಮ

Suddi Udaya

ಖೋ ಖೋ ಪಂದ್ಯಾಟ : ನಯನಾಡು ಸರಕಾರಿ‌ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಯ ವಿಕ್ರಮ್ ಕಲ್ಲಾಪು , ಉಪಾಧ್ಯಕ್ಷರಾಗಿ ಸೂರಪ್ಪ ಬಂಗೇರ ಆಯ್ಕೆ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ

Suddi Udaya

ಚಾರ್ಮಾಡಿ, ಕಡಿರುದ್ಯಾವರ ಕಾಡಾನೆ ಹಾವಳಿ

Suddi Udaya
error: Content is protected !!