July 23, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿ

ತೋಟತ್ತಾಡಿ : ಯಾಂತ್ರಿಕೃತ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಬೆಳ್ತಂಗಡಿ ತಾಲೂಕಿನ ವತಿಯಿಂದ ಮುದರ ಕುಂಬಾರರ ಮನೆಯಲ್ಲಿ ಯಂತ್ರಶ್ರೀ ಬಗ್ಗೆ ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು.

ಯೋಜನೆಯ ತಾಲೂಕಿನ ಕೃಷಿ-ಅಧಿಕಾರಿಯಾದ ರಾಮ್ ಕುಮಾರ್ ರವರು ಸಾಮಾನ್ಯ ಪದ್ಧತಿ ಮತ್ತು ಯಾಂತ್ರಿಕೃತ ಪದ್ಧತಿಗೆ ಇರುವಂತಹ ವ್ಯತ್ಯಾಸ,ಉತ್ತಮ ಭತ್ತದ ಬೀಜದ ಆಯ್ಕೆ,ಬಿಜೋಪಚಾರ,ಸಸಿ ಮಡಿಗೆ ಮಣ್ಣಿನ ಆಯ್ಕೆ,ಸಸಿ ಮಡಿ ತಯಾರಿ,ನಾಟಿ ಗದ್ದೆಯ ತಯಾರಿ,ಯಂತ್ರದ ಮೂಲಕ ಭತ್ತದ ಸಸಿಯ ನಾಟಿ,ಖರ್ಚು ಮತ್ತು ಆದಾಯದ ಬಗ್ಗೆ ರೈತರೊಂದಿಗೆ ಸಂವಾದದ ಮೂಲಕ ಸಂಪೂರ್ಣವಾದ ಮಾಹಿತಿಯನ್ನು ಪ್ರಾತ್ಯಕ್ಷಿಕೆಯ ಮೂಲಕ ನೀಡಿದರು.

ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ, ಮುದರ ಕುಂಬಾರ ಮತ್ತು ಮೇಲ್ವಿಚಾರಕರಾದ ರಾಜೇಶ್, ಸೇವಾ-ಪ್ರತಿನಿಧಿ ಹಾಗೂ ಭತ್ತ ಕೃಷಿ ಅನುಷ್ಠಾನ ಮಾಡುವ ರೈತರು ಉಪಸ್ಥಿತರಿದ್ದರು. ಯಾಂತ್ರಿಕೃತ ಭತ್ತದ ಬೇಸಾಯ ಮಾಡುವಂತೆ ಆಸಕ್ತ ರೈತರು ಉಪಸ್ಥಿತಿ ಇದ್ದು ಸಂವಾದದ ಮೂಲಕ ಮಾಹಿತಿಯನ್ನು ಪಡೆದುಕೊಂಡರು.

Related posts

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಸಂದರ್ಶನವನ್ನು ಎದುರಿಸುವುದು ಹೇಗೆ? ಎಂಬ ವಿಷಯದ ಕುರಿತು ಉಪನ್ಯಾಸ

Suddi Udaya

ನಾಳ: ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya

ಪಟ್ರಮೆ ಗ್ರಾ.ಪಂ. ಅಧ್ಯಕ್ಷರಾಗಿ ಮನೋಜ್, ಉಪಾಧ್ಯಕ್ಷರಾಗಿ ಮೋಹಿನಿ ಆಯ್ಕೆ

Suddi Udaya

ಕೊಕ್ಕಡ: ಕಲಾಯಿ ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ ತಾ.ಪಂ. ಗೃಹರಕ್ಷಕ ದಳದ ಕಛೇರಿಯಲ್ಲಿ ಆಯುಧಪೂಜೆ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ದೇವರ ದಶ೯ನ ಬಲಿ ಉತ್ಸವ

Suddi Udaya
error: Content is protected !!