September 6, 2026
Uncategorizedವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಚ್ಚಿನ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸರಕಾರಿ ಪ್ರೌಢ ಶಾಲೆ ಮಚ್ಚಿನ ಇಲ್ಲಿ 2022-23ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಅಂಕ ಗಳಿಸಿದ 9 ವಿದ್ಯಾರ್ಥಿಗಳಿಗೆ ಸ್ಥಳೀಯ ಪಾರೆಂಕಿ ಶ್ರೀ ಮಹೀಷಮರ್ಧಿನಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀಧರ ಭಟ್‌ರವರು ಪ್ರತಿ ವಿದ್ಯಾರ್ಥಿಗೂ ತಲಾ ರೂ 5,000ದಂತೆ, ನಗದು ಮೊತ್ತವನ್ನು ನೀಡಿ ಅಭಿನಂದಿಸಿದರು.

ಕಳೆದ ಶೈಕ್ಷಣಿಕ ವರ್ಷದಲ್ಲಿ 15 ವಿದ್ಯಾರ್ಥಿಗಳಿಗೆ ರೂಪಾಯಿ 75,000 ರೂ ಕೊಡುಗೆಯಾಗಿ ನೀಡಿ , ಮಕ್ಕಳನ್ನು ಹುರಿದುಂಬಿಸಿದ್ದಾರೆ. ಅಲ್ಲದೆ ಸ್ಥಳೀಯರಾದ ಮಡಂತ್ಯಾರ್‌ನಲ್ಲಿ ವ್ಯಾಪಾರಸ್ಥರಾಗಿರುವ ವಿಠಲ ಶೆಟ್ಟಿ ಮೂಡಯೂರು ಹಾಗೂ ಅವರ ಪುತ್ರರಾದ ಪ್ರಶಾಂತ ಶೆಟ್ಟಿ ಮೂಡಯೂರು ಇವರು ರೂಪಾಯಿ 30,000 ಮೌಲ್ಯದ ಸುಮಾರು 50 ವಿದ್ಯಾರ್ಥಿಗಳಿಗೆ ಉಚಿತ ಲೇಖನಿ ಸಾಮಾಗ್ರಿಗಳನ್ನು ಈ ಸಂದರ್ಭದಲ್ಲಿ ಹಸ್ತಾಂತರಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಎಸ್‌ಡಿಎಂಸಿ ಕಾರ್ಯಾಧ್ಯಕ್ಷ ರುಕ್ಮಯ ಮೂಲ್ಯ ಬಾಳಿಂಜ, ಎಸ್‌ಡಿಎಂಸಿ ಶಿಕ್ಷಣ ತಜ್ಞರಾದ ಡಾ| ಶ್ರೀ ಮಾಧವ ಶೆಟ್ಟಿ ,ಶಾಲಾ ಮುಖ್ಯ ಶಿಕ್ಷಕರಾದ ಎಸ್. ಪ್ರಕಾಶ್ ನಾಯ್ಕ್, ಸದಸ್ಯರಾದ ಶ್ರೀಮತಿ ಕುಸುಮಾವತಿ, ಶ್ರೀಮತಿ ಲೀಲಾವತಿ ಶ್ರೀಮತಿ ಭವ್ಯ ಹಾಗೂ ಶಿಕ್ಷಕ ವೃಂದ ಪ್ರಸಕ್ತ ಸಾಲಿನ ಹತ್ತನೇ ತರಗತಿಯ ವಿದ್ಯಾರ್ಥಿಗಳ ಪೋಷಕರು ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕರು ಸ್ವಾಗತಿಸಿ, ಕನ್ನಡ ಶಿಕ್ಷಕ ಅವಿನಾಶ್ ಧನ್ಯವಾದವಿತ್ತರು. ಗಣಿತ ಶಿಕ್ಷಕಿ ಶಿವಾಯಿನಿ ಶೇಟ್ ಕಾರ್ಯಕ್ರಮ ನಿರೂಪಿಸಿದರು.

Related posts

ವೇಣೂರು: ತಾಲೂಕು ಧ್ವನಿವರ್ಧಕ-ದೀಪಾಲಂಕಾರ ಮಾಲಕರ ಸಂಘದ ಸಭೆ: ಆ. 22ರಂದು ಮಹಾಸಭೆ ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಣಯ

Suddi Udaya

ಸೆ.1-3: ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ 352ನೇ ಆರಾಧನಾ ಮಹೋತ್ಸವ

Suddi Udaya

ಕಾಯರ್ಪಾಡಿಯಿಂದ ಕನ್ಯಾರಕೋಡಿವರೆಗೆ ಹದಗೆಟ್ಟ ರಸ್ತೆ : ದುರಸ್ತಿಗೊಳಿಸುವಂತೆ ಇಳಂತಿಲ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಅಬ್ದುಲ್ ಲತೀಷ್ ರಿಂದ ಗ್ರಾ.ಪಂ. ಗೆ ಮನವಿ

Suddi Udaya

ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೋತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ

Suddi Udaya

ಬೆಳ್ತಂಗಡಿ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ಆಶ್ರಯದಲ್ಲಿ ಕೊಕ್ಕಡ ಗ್ರಾಮ ಸಮಿತಿ ಸಭೆ, ನೂತನ ಸಮಿತಿ ರಚನೆ

Suddi Udaya

ಕಳೆಂಜ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya
error: Content is protected !!