September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಮಚ್ಚಿನ ಸ. ಪ್ರೌ. ಶಾಲೆಯಲ್ಲಿ ಪೋಷಕರ ಸಭೆ ಹಾಗೂ ಉಚಿತ ಪುಸ್ತಕ ವಿತರಣೆ

ಮಚ್ಚಿನ : ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ 10 ನೇ ತರಗತಿಯ ವಿದ್ಯಾರ್ಥಿಗಳ ಪೋಷಕರ ಸಭೆಯು ಜೂ.17 ರಂದು ನಡೆಯಿತು.

ಸಭೆಯಲ್ಲಿ 2022-23 ನೇ ಸಾಲಿನಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ 9 ಮಂದಿ ವಿದ್ಯಾರ್ಥಿಗಳಿಗೆ ಪಾರೆಂಕಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀಧರ ಭಟ್ ರವರು ಎಲ್ಲಾ ವಿದ್ಯಾರ್ಥಿಗಳಿಗೆ ತಲಾ 5000 ರೂಪಾಯಿ ನಗದು ಬಹುಮಾನ ನೀಡಿ ಆಶೀರ್ವದಿಸಿದರು. ಪಾರೆಂಕಿ ದೇವಸ್ಥಾನದ ಆಡಳಿತ ಮೊಕ್ತೇಸರರು ವಿಠಲಶೆಟ್ಟಿ ರವರು ನಮ್ಮ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ನೀಡಿ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಶಾಲಾಭಿವೃದ್ದಿ ಸಮಿತಿಯ ಕಾರ್ಯಾಧ್ಯಕ್ಷರು, ಸರ್ವ ಸದಸ್ಯರು ಹಾಜರಾಗಿದ್ದರು.

ಗಣಿತ ಶಿಕ್ಷಕಿ ಶಿವಾಯಿನಿ ಶೇಟ್ ಕಾರ್ಯಕ್ರಮ ನಿರೂಪಿಸಿ, ಕನ್ನಡ ಶಿಕ್ಷಕ ಅವಿನಾಶ್ ಧನ್ಯವಾದವಿತ್ತರು.

Related posts

ಮುಂಡಾಜೆ ವಲಯದ ಚಾರ್ಮಾಡಿ-ಬಿ ಕಾರ್ಯಕ್ಷೇತ್ರದಲ್ಲಿ ನೂತನ ಸರಸ್ವತಿ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ರಾಜ್ಯ ಮಟ್ಟದ ಸ್ಕೂಲ್ ಒಲಿಂಪಿಕ್ಸ್‌ ಅಥ್ಲೆಟಿಕ್ಸ್‌ : ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿನಿ ಪ್ರಥಮ

Suddi Udaya

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya

ನಾವರ ದೇವಸ್ಥಾನದ ಬಳಿ ರಬ್ಬರ್ ತೋಟಕ್ಕೆ ಬೆಂಕಿ

Suddi Udaya

ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya
error: Content is protected !!