25.8 C
ಪುತ್ತೂರು, ಬೆಳ್ತಂಗಡಿ
March 6, 2026
EpaperUncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಗ್ರಾಮದಲ್ಲಿ ಸಾಮಾಜಿಕ ಅರಣ್ಯ ಕಾರ್ಯಕ್ರಮ; 2 ಸಾವಿರ ಗಿಡಗಳ ನಾಟಿ

ವೇಣೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, BC ಟ್ರಸ್ಟ್ ಗುರುವಾಯನಕೆರೆ ಹಾಗೂ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ ವೇಣೂರು ಗ್ರಾಮದಲ್ಲಿ ನಡೆಸಲಾಯಿತು.

ಆ. ಪ್ರಯುಕ್ತ2000 ಹಣ್ಣಿನ ಹಾಗೂ ವಿವಿಧ ಜಾತಿಯ ಗಿಡಗಳ ನಾಟಿ ಮಾಡಲಾಯಿತು. ಶೌರ್ಯ ವಿಪತ್ತು ಘಟಕದ ಸದಸ್ಯರು ಗಿಡನಾಟಿ ಕಾರ್ಯದಲ್ಲಿ ಸಹಕಾರ ನೀಡಿದರು.‌ ಕಾರ್ಯಕ್ರಮದ‌ ಬಗ್ಗೆ ಪ್ರಸ್ತಾವಿಕ ಮಾತನಾಡಿದ ಕೃಷಿ ಮೇಲ್ವಿಚಾರಕರು ಕೃಷ್ಣ ಗೌಡ ರವರು, ಧರ್ಮಸ್ಥಳ ದ ಧರ್ಮಾಧಿಕಾರಿ ಡಾ. ಹೆಗ್ಗಡೆಯವರು ಸಂಕಲ್ಪಸಿದಂತೆ ಅರಣ್ಯ ಪ್ರದೇಶದ ಪ್ರಾಣಿಗಳು ಬೆಳೆ ಹಾನಿಯನ್ನು ಮಾಡದಂತೆ ನೋಡಿಕೊಳ್ಳುವರೇ ಕಾಡುಪ್ರದೇಶ ದಲ್ಲಿ ಕಾಡು ಪ್ರಾಣಿಗಳಿಗೆ ಬೇಕಾಗುವ ಹಣ್ಣು ಹಂಪಲು ದೊರೆಯುವಂತೆ ಅರಣ್ಯ ಇಲಾಖೆ ಸಹಕಾರ ಪಡೆದು ಕಾರ್ಯಕ್ರಮ ಆಯೋಜನೆ ಮಾಡಲಾಗಿದೆಯೆಂದರು.

ವೇಣೂರು ವಲಯದ ಉಪ ಅರಣ್ಯ ಅಧಿಕಾರಿ ಸುನಿಲ್ ಕುಮಾರ KS ಮಾತನಾಡಿ, ನಾವು ಈಗ 2000 ಗಿಡ ಕ್ಕೆ ಆಗುವಷ್ಟು ಹೊಂಡ ಹೊಡೆದಿದ್ದು ನಾಟಿ ಮಾಡಲು ಯೋಜನೆಯ ಸಹಕಾರ ನೀಡಿದ್ದು ಬಹಳಷ್ಟು ಅನುಕೂಲ ವಾಗಿದೆ ಎಂದು ನುಡಿದರು. ವಲಯದ ಮೇಲ್ವಿಚಾರಕಿ ಶಾಲಿನಿ ಮಾತನಾಡಿದರು.ಈ ಕಾರ್ಯಕ್ರಮದಲ್ಲಿ ಅರಣ್ಯ ಗಸ್ತು ಅಧಿಕಾರಿ ಈಶ್ವರ್, ಒಕ್ಕೂಟದ ಅಧ್ಯಕ್ಷ ಜಯಶಂಕರ ಹೆಗ್ಡೆ,ವಿಪತ್ತು ಸಂಯೋಜಕ ಗಣೇಶ್,ಹಾಗೂ ಜಯಂತಿ, ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ರೋಪಾ, ಸುನೀತಾ ಹಾಗೂ ವಿಪತ್ತು ತಂಡದ ಸದಸ್ಯರು ಉಪಸ್ಥಿತರಿದ್ದರು.

Related posts

ಜೂ.27: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನಿಂದ ರೂ. 1ಲಕ್ಷ ದೇಣಿಗೆ

Suddi Udaya

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಹರ್ಷಿತ ಆಯ್ಕೆ

Suddi Udaya

ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಶಾಂತ್ ಎಲ್. ನಿಯೋಜನೆ

Suddi Udaya

ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಮುಂಭಾಗದಲ್ಲಿ ಧ್ವಜಾರೋಹಣ

Suddi Udaya

ಅ.28 : ಈ ವರ್ಷದ ಕೊನೆಯ ‘ಚಂದ್ರಗ್ರಹಣ’ : 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ

Suddi Udaya
error: Content is protected !!