April 2, 2025
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿ

ತೋಟತ್ತಾಡಿ : ಯಾಂತ್ರಿಕೃತ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಬೆಳ್ತಂಗಡಿ ತಾಲೂಕಿನ ವತಿಯಿಂದ ಮುದರ ಕುಂಬಾರರ ಮನೆಯಲ್ಲಿ ಯಂತ್ರಶ್ರೀ ಬಗ್ಗೆ ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು.

ಯೋಜನೆಯ ತಾಲೂಕಿನ ಕೃಷಿ-ಅಧಿಕಾರಿಯಾದ ರಾಮ್ ಕುಮಾರ್ ರವರು ಸಾಮಾನ್ಯ ಪದ್ಧತಿ ಮತ್ತು ಯಾಂತ್ರಿಕೃತ ಪದ್ಧತಿಗೆ ಇರುವಂತಹ ವ್ಯತ್ಯಾಸ,ಉತ್ತಮ ಭತ್ತದ ಬೀಜದ ಆಯ್ಕೆ,ಬಿಜೋಪಚಾರ,ಸಸಿ ಮಡಿಗೆ ಮಣ್ಣಿನ ಆಯ್ಕೆ,ಸಸಿ ಮಡಿ ತಯಾರಿ,ನಾಟಿ ಗದ್ದೆಯ ತಯಾರಿ,ಯಂತ್ರದ ಮೂಲಕ ಭತ್ತದ ಸಸಿಯ ನಾಟಿ,ಖರ್ಚು ಮತ್ತು ಆದಾಯದ ಬಗ್ಗೆ ರೈತರೊಂದಿಗೆ ಸಂವಾದದ ಮೂಲಕ ಸಂಪೂರ್ಣವಾದ ಮಾಹಿತಿಯನ್ನು ಪ್ರಾತ್ಯಕ್ಷಿಕೆಯ ಮೂಲಕ ನೀಡಿದರು.

ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ, ಮುದರ ಕುಂಬಾರ ಮತ್ತು ಮೇಲ್ವಿಚಾರಕರಾದ ರಾಜೇಶ್, ಸೇವಾ-ಪ್ರತಿನಿಧಿ ಹಾಗೂ ಭತ್ತ ಕೃಷಿ ಅನುಷ್ಠಾನ ಮಾಡುವ ರೈತರು ಉಪಸ್ಥಿತರಿದ್ದರು. ಯಾಂತ್ರಿಕೃತ ಭತ್ತದ ಬೇಸಾಯ ಮಾಡುವಂತೆ ಆಸಕ್ತ ರೈತರು ಉಪಸ್ಥಿತಿ ಇದ್ದು ಸಂವಾದದ ಮೂಲಕ ಮಾಹಿತಿಯನ್ನು ಪಡೆದುಕೊಂಡರು.

Related posts

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಜಮೀಯತುಲ್ ಫಲಾಹ್ ವತಿಯಿಂದ ಪರೀಕ್ಷಾ ಪೂರ್ವ ತರಬೇತಿ

Suddi Udaya

ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಗೆ ಬ್ಯಾರಿ ಕೇಡ್ ಕೊಡುಗೆ

Suddi Udaya

ಬಜೆಟ್ ನಲ್ಲಿ ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಗಾಗಿ 10 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ:ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ : ಶೇಖರ್ ಲಾಯಿಲ

Suddi Udaya

ಪೆರಿಂಜೆ ಮದರಸ ವಿದ್ಯಾರ್ಥಿಗಳಿಗೆ ಸಾಹಿತ್ಯ ಮತ್ತು ಕಲೋತ್ಸವ ಸ್ಪರ್ಧೆ

Suddi Udaya

ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀರಾಮ ಕ್ಷೇತ್ರ, ಕಾಜೂರು ದಗಾ೯ಕ್ಕೆ ಭೇಟಿ

Suddi Udaya
error: Content is protected !!