24 C
ಪುತ್ತೂರು, ಬೆಳ್ತಂಗಡಿ
June 8, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿ

ತೋಟತ್ತಾಡಿ : ಯಾಂತ್ರಿಕೃತ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಬೆಳ್ತಂಗಡಿ ತಾಲೂಕಿನ ವತಿಯಿಂದ ಮುದರ ಕುಂಬಾರರ ಮನೆಯಲ್ಲಿ ಯಂತ್ರಶ್ರೀ ಬಗ್ಗೆ ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು.

ಯೋಜನೆಯ ತಾಲೂಕಿನ ಕೃಷಿ-ಅಧಿಕಾರಿಯಾದ ರಾಮ್ ಕುಮಾರ್ ರವರು ಸಾಮಾನ್ಯ ಪದ್ಧತಿ ಮತ್ತು ಯಾಂತ್ರಿಕೃತ ಪದ್ಧತಿಗೆ ಇರುವಂತಹ ವ್ಯತ್ಯಾಸ,ಉತ್ತಮ ಭತ್ತದ ಬೀಜದ ಆಯ್ಕೆ,ಬಿಜೋಪಚಾರ,ಸಸಿ ಮಡಿಗೆ ಮಣ್ಣಿನ ಆಯ್ಕೆ,ಸಸಿ ಮಡಿ ತಯಾರಿ,ನಾಟಿ ಗದ್ದೆಯ ತಯಾರಿ,ಯಂತ್ರದ ಮೂಲಕ ಭತ್ತದ ಸಸಿಯ ನಾಟಿ,ಖರ್ಚು ಮತ್ತು ಆದಾಯದ ಬಗ್ಗೆ ರೈತರೊಂದಿಗೆ ಸಂವಾದದ ಮೂಲಕ ಸಂಪೂರ್ಣವಾದ ಮಾಹಿತಿಯನ್ನು ಪ್ರಾತ್ಯಕ್ಷಿಕೆಯ ಮೂಲಕ ನೀಡಿದರು.

ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ, ಮುದರ ಕುಂಬಾರ ಮತ್ತು ಮೇಲ್ವಿಚಾರಕರಾದ ರಾಜೇಶ್, ಸೇವಾ-ಪ್ರತಿನಿಧಿ ಹಾಗೂ ಭತ್ತ ಕೃಷಿ ಅನುಷ್ಠಾನ ಮಾಡುವ ರೈತರು ಉಪಸ್ಥಿತರಿದ್ದರು. ಯಾಂತ್ರಿಕೃತ ಭತ್ತದ ಬೇಸಾಯ ಮಾಡುವಂತೆ ಆಸಕ್ತ ರೈತರು ಉಪಸ್ಥಿತಿ ಇದ್ದು ಸಂವಾದದ ಮೂಲಕ ಮಾಹಿತಿಯನ್ನು ಪಡೆದುಕೊಂಡರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನ ವಿತರಣೆ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರಕ್ಕೆ ನೂತನ ಪಲ್ಲಕ್ಕಿ ಸಮರ್ಪಣೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ

Suddi Udaya

ಈಶ್ವರ ಭಟ್ ಕಾಂತಾಜೆ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಂತಾಪ

Suddi Udaya

ಬೆಳಾಲು ಪ್ರೌಢಶಾಲೆ ಪ್ರಾರಂಭೋತ್ಸವ ಮತ್ತು ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಮಾ.27 ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya
error: Content is protected !!