25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿ

ತೋಟತ್ತಾಡಿ : ಯಾಂತ್ರಿಕೃತ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಬೆಳ್ತಂಗಡಿ ತಾಲೂಕಿನ ವತಿಯಿಂದ ಮುದರ ಕುಂಬಾರರ ಮನೆಯಲ್ಲಿ ಯಂತ್ರಶ್ರೀ ಬಗ್ಗೆ ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು.

ಯೋಜನೆಯ ತಾಲೂಕಿನ ಕೃಷಿ-ಅಧಿಕಾರಿಯಾದ ರಾಮ್ ಕುಮಾರ್ ರವರು ಸಾಮಾನ್ಯ ಪದ್ಧತಿ ಮತ್ತು ಯಾಂತ್ರಿಕೃತ ಪದ್ಧತಿಗೆ ಇರುವಂತಹ ವ್ಯತ್ಯಾಸ,ಉತ್ತಮ ಭತ್ತದ ಬೀಜದ ಆಯ್ಕೆ,ಬಿಜೋಪಚಾರ,ಸಸಿ ಮಡಿಗೆ ಮಣ್ಣಿನ ಆಯ್ಕೆ,ಸಸಿ ಮಡಿ ತಯಾರಿ,ನಾಟಿ ಗದ್ದೆಯ ತಯಾರಿ,ಯಂತ್ರದ ಮೂಲಕ ಭತ್ತದ ಸಸಿಯ ನಾಟಿ,ಖರ್ಚು ಮತ್ತು ಆದಾಯದ ಬಗ್ಗೆ ರೈತರೊಂದಿಗೆ ಸಂವಾದದ ಮೂಲಕ ಸಂಪೂರ್ಣವಾದ ಮಾಹಿತಿಯನ್ನು ಪ್ರಾತ್ಯಕ್ಷಿಕೆಯ ಮೂಲಕ ನೀಡಿದರು.

ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ, ಮುದರ ಕುಂಬಾರ ಮತ್ತು ಮೇಲ್ವಿಚಾರಕರಾದ ರಾಜೇಶ್, ಸೇವಾ-ಪ್ರತಿನಿಧಿ ಹಾಗೂ ಭತ್ತ ಕೃಷಿ ಅನುಷ್ಠಾನ ಮಾಡುವ ರೈತರು ಉಪಸ್ಥಿತರಿದ್ದರು. ಯಾಂತ್ರಿಕೃತ ಭತ್ತದ ಬೇಸಾಯ ಮಾಡುವಂತೆ ಆಸಕ್ತ ರೈತರು ಉಪಸ್ಥಿತಿ ಇದ್ದು ಸಂವಾದದ ಮೂಲಕ ಮಾಹಿತಿಯನ್ನು ಪಡೆದುಕೊಂಡರು.

Related posts

ಬಂದಾರು ಬಿಜೆಪಿ ಶಕ್ತಿಕೇಂದ್ರ ಮೈರೋಳ್ತಡ್ಕದಲ್ಲಿ ಮಹಾಸಂಪರ್ಕ ಅಭಿಯಾನ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ 20ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ, ತಾಲೂಕು ಮಹಿಳಾ ಬಂಟರ ವಿಭಾಗ ಹಾಗೂ ತಾಲೂಕು ಯುವ ಬಂಟರ ವಿಭಾಗ ನೇತೃತ್ವ ಗುರುವಾಯನಕೆರೆಯಲ್ಲಿ ಸಂಭ್ರಮದ ಬಂಟೋತ್ಸವ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
error: Content is protected !!