31.8 C
ಪುತ್ತೂರು, ಬೆಳ್ತಂಗಡಿ
May 18, 2025
Uncategorizedವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಚ್ಚಿನ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸರಕಾರಿ ಪ್ರೌಢ ಶಾಲೆ ಮಚ್ಚಿನ ಇಲ್ಲಿ 2022-23ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಅಂಕ ಗಳಿಸಿದ 9 ವಿದ್ಯಾರ್ಥಿಗಳಿಗೆ ಸ್ಥಳೀಯ ಪಾರೆಂಕಿ ಶ್ರೀ ಮಹೀಷಮರ್ಧಿನಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀಧರ ಭಟ್‌ರವರು ಪ್ರತಿ ವಿದ್ಯಾರ್ಥಿಗೂ ತಲಾ ರೂ 5,000ದಂತೆ, ನಗದು ಮೊತ್ತವನ್ನು ನೀಡಿ ಅಭಿನಂದಿಸಿದರು.

ಕಳೆದ ಶೈಕ್ಷಣಿಕ ವರ್ಷದಲ್ಲಿ 15 ವಿದ್ಯಾರ್ಥಿಗಳಿಗೆ ರೂಪಾಯಿ 75,000 ರೂ ಕೊಡುಗೆಯಾಗಿ ನೀಡಿ , ಮಕ್ಕಳನ್ನು ಹುರಿದುಂಬಿಸಿದ್ದಾರೆ. ಅಲ್ಲದೆ ಸ್ಥಳೀಯರಾದ ಮಡಂತ್ಯಾರ್‌ನಲ್ಲಿ ವ್ಯಾಪಾರಸ್ಥರಾಗಿರುವ ವಿಠಲ ಶೆಟ್ಟಿ ಮೂಡಯೂರು ಹಾಗೂ ಅವರ ಪುತ್ರರಾದ ಪ್ರಶಾಂತ ಶೆಟ್ಟಿ ಮೂಡಯೂರು ಇವರು ರೂಪಾಯಿ 30,000 ಮೌಲ್ಯದ ಸುಮಾರು 50 ವಿದ್ಯಾರ್ಥಿಗಳಿಗೆ ಉಚಿತ ಲೇಖನಿ ಸಾಮಾಗ್ರಿಗಳನ್ನು ಈ ಸಂದರ್ಭದಲ್ಲಿ ಹಸ್ತಾಂತರಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಎಸ್‌ಡಿಎಂಸಿ ಕಾರ್ಯಾಧ್ಯಕ್ಷ ರುಕ್ಮಯ ಮೂಲ್ಯ ಬಾಳಿಂಜ, ಎಸ್‌ಡಿಎಂಸಿ ಶಿಕ್ಷಣ ತಜ್ಞರಾದ ಡಾ| ಶ್ರೀ ಮಾಧವ ಶೆಟ್ಟಿ ,ಶಾಲಾ ಮುಖ್ಯ ಶಿಕ್ಷಕರಾದ ಎಸ್. ಪ್ರಕಾಶ್ ನಾಯ್ಕ್, ಸದಸ್ಯರಾದ ಶ್ರೀಮತಿ ಕುಸುಮಾವತಿ, ಶ್ರೀಮತಿ ಲೀಲಾವತಿ ಶ್ರೀಮತಿ ಭವ್ಯ ಹಾಗೂ ಶಿಕ್ಷಕ ವೃಂದ ಪ್ರಸಕ್ತ ಸಾಲಿನ ಹತ್ತನೇ ತರಗತಿಯ ವಿದ್ಯಾರ್ಥಿಗಳ ಪೋಷಕರು ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕರು ಸ್ವಾಗತಿಸಿ, ಕನ್ನಡ ಶಿಕ್ಷಕ ಅವಿನಾಶ್ ಧನ್ಯವಾದವಿತ್ತರು. ಗಣಿತ ಶಿಕ್ಷಕಿ ಶಿವಾಯಿನಿ ಶೇಟ್ ಕಾರ್ಯಕ್ರಮ ನಿರೂಪಿಸಿದರು.

Related posts

ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿದ ನೆಂಪು ಕಾರ್ಯಕ್ರಮ

Suddi Udaya

ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲದ ವತಿಯಿಂದ ಸಿಯೋನ್ ಆಶ್ರಮದ ಆಡಳಿತ ಟ್ರಸ್ಟಿ ಶ್ರೀಮತಿ ಮೇರಿ ಯು.ಪಿ. ರವರಿಗೆ ಸನ್ಮಾನ

Suddi Udaya

ಮಾ.15ರಂದು ಸೌತಡ್ಕದಲ್ಲಿ, ವಿಶ್ವ ಮಹಿಳಾ ದಿನಾಚರಣೆ, ಸಂಜೀವಿನಿ ಸಂತೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಆಟೋಟ ಸ್ಪರ್ಧೆ

Suddi Udaya

ಹಿಂದೂ ಕಾಯ೯ಕತ೯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ತಂಗಡಿಯ ನೌಷದ್ ಪತ್ತೆಗೆ ಎನ್.ಐ.ಎ ರೂ. 2 ಲಕ್ಷ ಬಹುಮಾನ ಘೋಷಣೆ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೈ‌ ಕೊಟ್ಟ ವಿದ್ಯುತ್: ವೈದ್ಯರಿಂದ ಕತ್ತಲಲ್ಲಿ ರೋಗಿಗಳ ಆರೋಗ್ಯ ತಪಾಸಣೆ: ಇನ್ವರ್ಟರ್ ವ್ಯವಸ್ಥೆಗಳು ಇಲ್ಲದೆ ಟಾರ್ಚ್ ಬೆಳಕಿನಿಂದ ಚಿಕಿತ್ಸೆ ನೀಡಬೇಕಾದ ಸ್ಥಿತಿ

Suddi Udaya
error: Content is protected !!