37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಮಚ್ಚಿನ ಸ. ಪ್ರೌ. ಶಾಲೆಯಲ್ಲಿ ಪೋಷಕರ ಸಭೆ ಹಾಗೂ ಉಚಿತ ಪುಸ್ತಕ ವಿತರಣೆ

ಮಚ್ಚಿನ : ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ 10 ನೇ ತರಗತಿಯ ವಿದ್ಯಾರ್ಥಿಗಳ ಪೋಷಕರ ಸಭೆಯು ಜೂ.17 ರಂದು ನಡೆಯಿತು.

ಸಭೆಯಲ್ಲಿ 2022-23 ನೇ ಸಾಲಿನಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ 9 ಮಂದಿ ವಿದ್ಯಾರ್ಥಿಗಳಿಗೆ ಪಾರೆಂಕಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀಧರ ಭಟ್ ರವರು ಎಲ್ಲಾ ವಿದ್ಯಾರ್ಥಿಗಳಿಗೆ ತಲಾ 5000 ರೂಪಾಯಿ ನಗದು ಬಹುಮಾನ ನೀಡಿ ಆಶೀರ್ವದಿಸಿದರು. ಪಾರೆಂಕಿ ದೇವಸ್ಥಾನದ ಆಡಳಿತ ಮೊಕ್ತೇಸರರು ವಿಠಲಶೆಟ್ಟಿ ರವರು ನಮ್ಮ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ನೀಡಿ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಶಾಲಾಭಿವೃದ್ದಿ ಸಮಿತಿಯ ಕಾರ್ಯಾಧ್ಯಕ್ಷರು, ಸರ್ವ ಸದಸ್ಯರು ಹಾಜರಾಗಿದ್ದರು.

ಗಣಿತ ಶಿಕ್ಷಕಿ ಶಿವಾಯಿನಿ ಶೇಟ್ ಕಾರ್ಯಕ್ರಮ ನಿರೂಪಿಸಿ, ಕನ್ನಡ ಶಿಕ್ಷಕ ಅವಿನಾಶ್ ಧನ್ಯವಾದವಿತ್ತರು.

Related posts

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya

ಬಳಂಜ: ಸ. ಉ. ಪ್ರಾಥಮಿಕ ಶಾಲೆಯ ಶಿಕ್ಷಕಿಯರಾದ ಶ್ರೀಮತಿ ನೇಮಮ್ಮ ಹಾಗೂ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಬೀಳ್ಕೊಡುಗೆ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕಂಪ್ಯೂಟ‌ರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಲಾಯಿಲ: ಎಸ್. ಡಿ. ಪಿ. ಐ ವತಿಯಿಂದ ಹಳೆಪೇಟೆ ವ್ಯಾಪ್ತಿಯಲ್ಲಿ ನ್ಯಾಯ ಬೆಲೆ ಅಂಗಡಿಗಾಗಿ ಆಹಾರ ನಿರೀಕ್ಷಕರಿಗೆ ಮನವಿ

Suddi Udaya

ಬೆಳಾಲು: ಕೊಲ್ಪಾಡಿ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ. ಸದಸ್ಯೆ ಶ್ರೀಮತಿ ಟಾಕಮ್ಮ ನಿಧನ

Suddi Udaya
error: Content is protected !!