ಮುಂಡೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕವನ್ನು ಮಂಗಳಗಿರಿ ಕ್ಷೇತ್ರದಿಂದ ಉಚಿತವಾಗಿ ನೀಡಲಾಯಿತು.
ಮಂಗಳಗಿರಿ ಶ್ರೀ ನಾಗಕಲ್ಲುರ್ಟಿ ದೈವಸ್ಥಾನದ ಆಡಳಿತ ಮೊಕ್ತೇಸರರು ರಾಜೀವ ರವರು ವಿದ್ಯಾರ್ಥಿಗಳಿಗೆ ಪುಸ್ತಕವನ್ನು ನೀಡಿ ಶುಭಹಾರೈಸಿದರು.

ಸಭೆಯಲ್ಲಿ ಎಸ್.ಡಿ.ಎಮ್.ಸಿ ಸಮಿತಿಯ ಅಧ್ಯಕ್ಷರು ಸತೀಶ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೀವ್ ಸಾಲ್ಯಾನ್ , ಸ್ಥಳೀಯರಾದ ಅಶೋಕ್ ಕುಮಾರ್ ಜೈನ್ , ಗ್ರಾ.ಪಂ. ಸದಸ್ಯ ಸಂತೋಷ್ ಕುಮಾರ್ ಮುಂಡೂರು, ಉದ್ಯಮಿಗಳಾದ ಜಯರಾಜ್ ನಡಕ್ಕರ, ಮುಂಡೂರು ಸೇವಾಪ್ರತಿನಿಧಿ ಭಾರತೀ ಆಚಾರ್ಯ, ಶಾಲಾ ಶಿಕ್ಷಕಿ ಶ್ರೀಮತಿ ಸುಂದರಿ ಮತ್ತು ವಿದ್ಯಾರ್ಥಿಗಳು, ಪೋಷಕರು, ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯ ಕಲ್ಲೇಶ್ ಕಾರ್ಯಕ್ರಮ ನಿರೂಪಿಸಿದರು.











