ಲಾಯಿಲ ಕಕ್ಕೇನಾದ ಯುವಕ ಭರತ್ ಕುಮಾರ್ ನಾಪತ್ತೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ : ಪತ್ತೆಗಾಗಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು

Suddi Udaya

ಬೆಳ್ತಂಗಡಿ: ಲಾಯಿಲ ಗ್ರಾಮದ ಕಕ್ಕೇನಾದ ನಿವಾಸಿ ಭರತ್ ಕುಮಾರ್ 33 ವ ವರ್ಷ ಅವರು ಕಾಣೆಯಾಗಿದ್ದು ಪತ್ತೆಗಾಗಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಅವರ ಸಹೋದರ ರವಿ ನಾಯ್ಕ್ ದೂರು ನೀಡಿದ್ದಾರೆ

ಭರತ್ ಕುಮಾರ್ ಪೈಟಿಂಗ್ ಕೆಲಸ ಮಾಡಿಕೊಂಡಿದ್ದು ದಿನಾಂಕ 05.06.2023 ರಂದ ತಾಯಿ ಮತ್ತು ತಮ್ಮ ಇಬ್ಬರೇ ಮನೆಯಲ್ಲಿದ್ದು ಬೆಳಿಗ್ಗೆ ಸುಮಾರು 10.30 ಗಂಟೆಗೆ ಮನೆಯಲ್ಲಿ ಯಾರಿಗೂ ತಿಳಿಸದೆ ಭರತ್ ಕುಮಾರನು ಮನೆಯಿಂದ ಹೋಗಿದ್ದು ಈವರೆಗೆ ಆತನು ಮನೆಗೆ ವಾಪಸು ಬಂದಿರುವುದಿಲ್ಲ ಆತನಿಗೆ ದೂರವಾಣಿ ಕರೆ ಮಾಡಿದ್ದು ಆತನ ಮೊಬೈಲ್ ಸ್ವಿಚ್ ಆಪ್ ಆಗಿರುತ್ತದೆ ಈ ಮೊದಲು ಕೆಲಸಕ್ಕೆ ಹೋದವನು 2-3 ವಾರ ಬಿಟ್ಟು ಮನೆಗೆ ವಾಪಸ್ಸು ಬರುತ್ತಿದ್ದು ಹಾಗೆ ಆಗಿರಬಹುದು ಎಂದು ತಿಳಿದು ಪತ್ತೆಗೆ ಪ್ರಯತ್ನಿಸಲಿಲ್ಲ. ಆದರೆ ಇಲ್ಲಿಯವರೆಗೆ ಮನೆಗೆ ವಾಪಸು ಬಾರದೇ ಇರುವುದರಿಂದ ಸಂಬಂಧಿಕರಲ್ಲಿ ವಿಚಾರಿಸಿ ಎಲ್ಲಿಯೂ ಪತ್ತೆಯಾಗದೇ ಇದ್ದುದರಿಂದ ಕಾಣೆಯಾದ ಭರತ್ ಕುಮಾರ್ ನನ್ನು ಪತ್ತೆ ಮಾಡಿಕೊಡಬೇಕಾಗಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Leave a Comment

error: Content is protected !!