23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ ಕಕ್ಕೇನಾದ ಯುವಕ ಭರತ್ ಕುಮಾರ್ ನಾಪತ್ತೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ : ಪತ್ತೆಗಾಗಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು

ಬೆಳ್ತಂಗಡಿ: ಲಾಯಿಲ ಗ್ರಾಮದ ಕಕ್ಕೇನಾದ ನಿವಾಸಿ ಭರತ್ ಕುಮಾರ್ 33 ವ ವರ್ಷ ಅವರು ಕಾಣೆಯಾಗಿದ್ದು ಪತ್ತೆಗಾಗಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಅವರ ಸಹೋದರ ರವಿ ನಾಯ್ಕ್ ದೂರು ನೀಡಿದ್ದಾರೆ

ಭರತ್ ಕುಮಾರ್ ಪೈಟಿಂಗ್ ಕೆಲಸ ಮಾಡಿಕೊಂಡಿದ್ದು ದಿನಾಂಕ 05.06.2023 ರಂದ ತಾಯಿ ಮತ್ತು ತಮ್ಮ ಇಬ್ಬರೇ ಮನೆಯಲ್ಲಿದ್ದು ಬೆಳಿಗ್ಗೆ ಸುಮಾರು 10.30 ಗಂಟೆಗೆ ಮನೆಯಲ್ಲಿ ಯಾರಿಗೂ ತಿಳಿಸದೆ ಭರತ್ ಕುಮಾರನು ಮನೆಯಿಂದ ಹೋಗಿದ್ದು ಈವರೆಗೆ ಆತನು ಮನೆಗೆ ವಾಪಸು ಬಂದಿರುವುದಿಲ್ಲ ಆತನಿಗೆ ದೂರವಾಣಿ ಕರೆ ಮಾಡಿದ್ದು ಆತನ ಮೊಬೈಲ್ ಸ್ವಿಚ್ ಆಪ್ ಆಗಿರುತ್ತದೆ ಈ ಮೊದಲು ಕೆಲಸಕ್ಕೆ ಹೋದವನು 2-3 ವಾರ ಬಿಟ್ಟು ಮನೆಗೆ ವಾಪಸ್ಸು ಬರುತ್ತಿದ್ದು ಹಾಗೆ ಆಗಿರಬಹುದು ಎಂದು ತಿಳಿದು ಪತ್ತೆಗೆ ಪ್ರಯತ್ನಿಸಲಿಲ್ಲ. ಆದರೆ ಇಲ್ಲಿಯವರೆಗೆ ಮನೆಗೆ ವಾಪಸು ಬಾರದೇ ಇರುವುದರಿಂದ ಸಂಬಂಧಿಕರಲ್ಲಿ ವಿಚಾರಿಸಿ ಎಲ್ಲಿಯೂ ಪತ್ತೆಯಾಗದೇ ಇದ್ದುದರಿಂದ ಕಾಣೆಯಾದ ಭರತ್ ಕುಮಾರ್ ನನ್ನು ಪತ್ತೆ ಮಾಡಿಕೊಡಬೇಕಾಗಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಕೊಕ್ಕಡ ಮಂಡಲ ವತಿಯಿಂದ ಹಿಂದೂ ಸಂಗಮ

Suddi Udaya

ಲೆಟ್ಸ್ ಥ್ಯಾಂಕ್ ಫೌಂಡೇಶನ್ ವತಿಯಿಂದ ಕಕ್ಕಿಂಜೆಯ ವಿಶೇಷ ಚೇತನ ಮೊಹಮ್ಮದ್ ಕುಂಞಿ ರವರಿಗೆ ಗೂಡಂಗಡಿಯ ಸಹಕಾರ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮಾಜಿಕ ಅರಣ್ಯೀಕರಣ ಗಿಡ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅವಶ್ಯವಿರುವ ರಸ್ತೆ ಮತ್ತು ಸೇತುವೆ ರಚನೆ ಕಾಮಗಾರಿ ಅನುದಾನಕ್ಕೆ ಲೋಕೋಪಯೋಗಿ ಸಚಿವರಿಗೆ ಮನವಿ

Suddi Udaya

ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ : ಮುಂಡಾಜೆಯ ತೇಜಲ್ ಕೆ .ಆರ್ ರವರಿಗೆ ಬೆಳ್ಳಿಯ ಪದಕ

Suddi Udaya

ಬೆಳ್ತಂಗಡಿಯಲ್ಲಿ “ರಾಜಧಾನಿ ಗೋಲ್ಡ್&ಡೈಮಂಡ್” ವಿಸ್ತೃತ ಮಳಿಗೆ ಉದ್ಘಾಟನೆ

Suddi Udaya
error: Content is protected !!