July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ

ಬೆಳ್ತಂಗಡಿ: ಸರಕಾರಿ ಸರಕಾರಿ ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಹಾಗೂ ಡಯಾಲಿಸಿಸ್ ಘಟಕದಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಇತ್ತೀಚೆಗೆ ಮಾಜಿ ಶಾಸಕ ವಸಂತ ಬಂಗೇರ ಭೇಟಿ ನೀಡಿ, ವೈದ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ 15 ದಿನಗಳಲ್ಲಿ ಆಸ್ಪತ್ರೆಯ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದ್ದ ಜಿಲ್ಲಾ ಆರೋಗ್ಯಾಧಿಕಾರಿಗಳು‌ ಜೂ.17 ರಂದು ಮಾಜಿ ಶಾಸಕ ವಸಂತ ಬಂಗೇರ ಜೊತೆ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಲೂಕಿನ ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇದ್ದು ಇದಕ್ಕೆ ತಕ್ಷಣ ಪರಿಹಾರ ಮಾಡುವಂತೆ ವಸಂತ ಬಂಗೇರ ಡಿ.ಎಚ್.ಓ ಅವರಿಗೆ ತಿಳಿಸಿದರು.

ಮಾಧ್ಯಮದವರ ಜೊತೆ ಮಾತಾಡಿದ ಡಿ.ಎಚ್.ಒ ಡಾ. ಕಿಶೋರ್ ಕುಮಾರ್, ಈಗ ಬೆಳ್ತಂಗಡಿ ಸರಕಾರಿ ಆಸ್ಪತ್ರೆ ಪರಿಶೀಲನೆ ಮಾಡಲಾಗಿದೆ ಎಲ್ಲಾ ಕೊರತೆಗಳನ್ನು ಬಗೆಹರಿಸುವಲ್ಲಿ ಪ್ರಯತ್ನಿಸಿದ್ದೇವೆ ಎಂದರು.


ಈ ವೇಳೆ ತಾಲೂಕಿನ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು, ಕಾಂಗ್ರೆಸ್ ಉಭಯ ಘಟಕದ ಅಧ್ಯಕ್ಷರುಗಳಾದ ರಂಜನ್ ಗೌಡ, ಶೈಲೇಶ್ ಕುಮಾರ್, ಕಾರ್ಮಿಕ ಮುಖಂಡ ಬಿ.ಎಮ್ ಭಟ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Related posts

ಬಂಟ್ವಾಳದ ಮಹಮ್ಮದ್ ರಫೀಕ್ ಕೊಲೆ ಪ್ರಕರಣ: ಆರೋಪಿ ಸಿದ್ದಿಕ್ ಗೆ ಜೀವಾವಧಿ ಶಿಕ್ಷೆ

Suddi Udaya

ಸುಲ್ಕೇರಿ ಶ್ರೀವಿದ್ಯಾ ಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರದ ಕುಟೀರ ಉದ್ಘಾಟನೆ

Suddi Udaya

ಮಾಜಿ ಸಚಿವ ಹಾಗೂ ಹಿರಿಯ ರಾಜಕೀಯ ಮುತ್ಸದ್ಧಿ ಡಿ. ಬಿ. ಚಂದ್ರೇಗೌಡ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ: ರಕ್ಷಿತ್ ಶಿವರಾಮ್

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಜಯ; ಹಗಲಿರುಳು ದುಡಿದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ತೋಟತ್ತಾಡಿ: ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya
error: Content is protected !!