22.9 C
ಪುತ್ತೂರು, ಬೆಳ್ತಂಗಡಿ
March 7, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿ

ತೋಟತ್ತಾಡಿ : ಯಾಂತ್ರಿಕೃತ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಬೆಳ್ತಂಗಡಿ ತಾಲೂಕಿನ ವತಿಯಿಂದ ಮುದರ ಕುಂಬಾರರ ಮನೆಯಲ್ಲಿ ಯಂತ್ರಶ್ರೀ ಬಗ್ಗೆ ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು.

ಯೋಜನೆಯ ತಾಲೂಕಿನ ಕೃಷಿ-ಅಧಿಕಾರಿಯಾದ ರಾಮ್ ಕುಮಾರ್ ರವರು ಸಾಮಾನ್ಯ ಪದ್ಧತಿ ಮತ್ತು ಯಾಂತ್ರಿಕೃತ ಪದ್ಧತಿಗೆ ಇರುವಂತಹ ವ್ಯತ್ಯಾಸ,ಉತ್ತಮ ಭತ್ತದ ಬೀಜದ ಆಯ್ಕೆ,ಬಿಜೋಪಚಾರ,ಸಸಿ ಮಡಿಗೆ ಮಣ್ಣಿನ ಆಯ್ಕೆ,ಸಸಿ ಮಡಿ ತಯಾರಿ,ನಾಟಿ ಗದ್ದೆಯ ತಯಾರಿ,ಯಂತ್ರದ ಮೂಲಕ ಭತ್ತದ ಸಸಿಯ ನಾಟಿ,ಖರ್ಚು ಮತ್ತು ಆದಾಯದ ಬಗ್ಗೆ ರೈತರೊಂದಿಗೆ ಸಂವಾದದ ಮೂಲಕ ಸಂಪೂರ್ಣವಾದ ಮಾಹಿತಿಯನ್ನು ಪ್ರಾತ್ಯಕ್ಷಿಕೆಯ ಮೂಲಕ ನೀಡಿದರು.

ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ, ಮುದರ ಕುಂಬಾರ ಮತ್ತು ಮೇಲ್ವಿಚಾರಕರಾದ ರಾಜೇಶ್, ಸೇವಾ-ಪ್ರತಿನಿಧಿ ಹಾಗೂ ಭತ್ತ ಕೃಷಿ ಅನುಷ್ಠಾನ ಮಾಡುವ ರೈತರು ಉಪಸ್ಥಿತರಿದ್ದರು. ಯಾಂತ್ರಿಕೃತ ಭತ್ತದ ಬೇಸಾಯ ಮಾಡುವಂತೆ ಆಸಕ್ತ ರೈತರು ಉಪಸ್ಥಿತಿ ಇದ್ದು ಸಂವಾದದ ಮೂಲಕ ಮಾಹಿತಿಯನ್ನು ಪಡೆದುಕೊಂಡರು.

Related posts

ಸಂತ ತೆರೇಸಾ ಶಿಕ್ಷಣ ಸಂಸ್ಥೆಗಳಲ್ಲಿ ಅಗ್ನಿಶಾಮಕ ದಳ ಹಾಗೂ ವರ್ತಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಪ್ರಕೃತಿ ವಿಕೋಪಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಾತ್ಯಕ್ಷಿಕೆ

Suddi Udaya

ದ.ಕ. ಜಿಲ್ಲೆಯಲ್ಲಿ ಬಿಎಸ್ಸೆನ್ನೆಲ್ 4ಜಿ ಸೇವೆ

Suddi Udaya

ರೈತರ, ಯುವಜನರ, ಬಡವರ, ಮಧ್ಯಮ ವರ್ಗದವರ ವಿರೋಧಿ ಬಜೆಟ್: ರಕ್ಷಿತ್ ಶಿವರಾಂ

Suddi Udaya

ಇಂಟರ್ನ್ಯಾಷನಲ್ ಓಪನ್ ಫಿಡೆ ರೇಟೆಡ್ ಪಂದ್ಯಾಟ : ಬೆಸ್ಟ್ ಅನ್‌ರೇಟೆಡ್ ವಿಭಾಗದಲ್ಲಿ ಕೊಕ್ಕಡದ ಸಮರ್ಥ್ ಭಟ್ ತೃತೀಯ

Suddi Udaya

ಕುಪ್ಪೆಟ್ಟಿ :ಕುಪ್ಪೆಟ್ಟಿ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ(CRP)ಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಧ್ಯಾ ಬಿ. ಗೋಳಿತೊಟ್ಟು ಶಾಲೆಗೆ ವರ್ಗಾವಣೆ

Suddi Udaya

ಉಜಿರೆ: ಅನುಗ್ರಹ ಶಾಲಾ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya
error: Content is protected !!