22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಚ್ಚಿನ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸರಕಾರಿ ಪ್ರೌಢ ಶಾಲೆ ಮಚ್ಚಿನ ಇಲ್ಲಿ 2022-23ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಅಂಕ ಗಳಿಸಿದ 9 ವಿದ್ಯಾರ್ಥಿಗಳಿಗೆ ಸ್ಥಳೀಯ ಪಾರೆಂಕಿ ಶ್ರೀ ಮಹೀಷಮರ್ಧಿನಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀಧರ ಭಟ್‌ರವರು ಪ್ರತಿ ವಿದ್ಯಾರ್ಥಿಗೂ ತಲಾ ರೂ 5,000ದಂತೆ, ನಗದು ಮೊತ್ತವನ್ನು ನೀಡಿ ಅಭಿನಂದಿಸಿದರು.

ಕಳೆದ ಶೈಕ್ಷಣಿಕ ವರ್ಷದಲ್ಲಿ 15 ವಿದ್ಯಾರ್ಥಿಗಳಿಗೆ ರೂಪಾಯಿ 75,000 ರೂ ಕೊಡುಗೆಯಾಗಿ ನೀಡಿ , ಮಕ್ಕಳನ್ನು ಹುರಿದುಂಬಿಸಿದ್ದಾರೆ. ಅಲ್ಲದೆ ಸ್ಥಳೀಯರಾದ ಮಡಂತ್ಯಾರ್‌ನಲ್ಲಿ ವ್ಯಾಪಾರಸ್ಥರಾಗಿರುವ ವಿಠಲ ಶೆಟ್ಟಿ ಮೂಡಯೂರು ಹಾಗೂ ಅವರ ಪುತ್ರರಾದ ಪ್ರಶಾಂತ ಶೆಟ್ಟಿ ಮೂಡಯೂರು ಇವರು ರೂಪಾಯಿ 30,000 ಮೌಲ್ಯದ ಸುಮಾರು 50 ವಿದ್ಯಾರ್ಥಿಗಳಿಗೆ ಉಚಿತ ಲೇಖನಿ ಸಾಮಾಗ್ರಿಗಳನ್ನು ಈ ಸಂದರ್ಭದಲ್ಲಿ ಹಸ್ತಾಂತರಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಎಸ್‌ಡಿಎಂಸಿ ಕಾರ್ಯಾಧ್ಯಕ್ಷ ರುಕ್ಮಯ ಮೂಲ್ಯ ಬಾಳಿಂಜ, ಎಸ್‌ಡಿಎಂಸಿ ಶಿಕ್ಷಣ ತಜ್ಞರಾದ ಡಾ| ಶ್ರೀ ಮಾಧವ ಶೆಟ್ಟಿ ,ಶಾಲಾ ಮುಖ್ಯ ಶಿಕ್ಷಕರಾದ ಎಸ್. ಪ್ರಕಾಶ್ ನಾಯ್ಕ್, ಸದಸ್ಯರಾದ ಶ್ರೀಮತಿ ಕುಸುಮಾವತಿ, ಶ್ರೀಮತಿ ಲೀಲಾವತಿ ಶ್ರೀಮತಿ ಭವ್ಯ ಹಾಗೂ ಶಿಕ್ಷಕ ವೃಂದ ಪ್ರಸಕ್ತ ಸಾಲಿನ ಹತ್ತನೇ ತರಗತಿಯ ವಿದ್ಯಾರ್ಥಿಗಳ ಪೋಷಕರು ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕರು ಸ್ವಾಗತಿಸಿ, ಕನ್ನಡ ಶಿಕ್ಷಕ ಅವಿನಾಶ್ ಧನ್ಯವಾದವಿತ್ತರು. ಗಣಿತ ಶಿಕ್ಷಕಿ ಶಿವಾಯಿನಿ ಶೇಟ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: ವಿವಿಧ ಕ್ಷೇತ್ರಗಳ ಐದು ಮಂದಿ ಸಾಧಕರಿಗೆ ಗೌರವಾರ್ಪಣೆ

Suddi Udaya

ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ಅಶೋಕ್ ಪೂಜಾರಿ, ಉಪಾಧ್ಯಕ್ಷರಾಗಿ ಮೋಹನಂದ ಪೂಜಾರಿ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನ ರೂ. 2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

Suddi Udaya

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಬೆಳ್ತಂಗಡಿ ಶೋರೂಂ ನಲ್ಲಿ ಚಿನ್ನದ ಮತ್ತು ಬೆಳ್ಳಿಯ ನಾಣ್ಯ ಗೆದ್ದ ಅದೃಷ್ಟವಂತರು

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ರವೀಶ್ ಪಡುಮಲೆಗೆ ಸನ್ಮಾನ

Suddi Udaya

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya
error: Content is protected !!