ಮಚ್ಚಿನ ಸ. ಪ್ರೌ. ಶಾಲೆಯಲ್ಲಿ ಪೋಷಕರ ಸಭೆ ಹಾಗೂ ಉಚಿತ ಪುಸ್ತಕ ವಿತರಣೆ

Suddi Udaya

ಮಚ್ಚಿನ : ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ 10 ನೇ ತರಗತಿಯ ವಿದ್ಯಾರ್ಥಿಗಳ ಪೋಷಕರ ಸಭೆಯು ಜೂ.17 ರಂದು ನಡೆಯಿತು.

ಸಭೆಯಲ್ಲಿ 2022-23 ನೇ ಸಾಲಿನಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ 9 ಮಂದಿ ವಿದ್ಯಾರ್ಥಿಗಳಿಗೆ ಪಾರೆಂಕಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀಧರ ಭಟ್ ರವರು ಎಲ್ಲಾ ವಿದ್ಯಾರ್ಥಿಗಳಿಗೆ ತಲಾ 5000 ರೂಪಾಯಿ ನಗದು ಬಹುಮಾನ ನೀಡಿ ಆಶೀರ್ವದಿಸಿದರು. ಪಾರೆಂಕಿ ದೇವಸ್ಥಾನದ ಆಡಳಿತ ಮೊಕ್ತೇಸರರು ವಿಠಲಶೆಟ್ಟಿ ರವರು ನಮ್ಮ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ನೀಡಿ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಶಾಲಾಭಿವೃದ್ದಿ ಸಮಿತಿಯ ಕಾರ್ಯಾಧ್ಯಕ್ಷರು, ಸರ್ವ ಸದಸ್ಯರು ಹಾಜರಾಗಿದ್ದರು.

ಗಣಿತ ಶಿಕ್ಷಕಿ ಶಿವಾಯಿನಿ ಶೇಟ್ ಕಾರ್ಯಕ್ರಮ ನಿರೂಪಿಸಿ, ಕನ್ನಡ ಶಿಕ್ಷಕ ಅವಿನಾಶ್ ಧನ್ಯವಾದವಿತ್ತರು.

Leave a Comment

error: Content is protected !!