25.5 C
ಪುತ್ತೂರು, ಬೆಳ್ತಂಗಡಿ
April 24, 2026
EpaperUncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಗ್ರಾಮದಲ್ಲಿ ಸಾಮಾಜಿಕ ಅರಣ್ಯ ಕಾರ್ಯಕ್ರಮ; 2 ಸಾವಿರ ಗಿಡಗಳ ನಾಟಿ

ವೇಣೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, BC ಟ್ರಸ್ಟ್ ಗುರುವಾಯನಕೆರೆ ಹಾಗೂ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ ವೇಣೂರು ಗ್ರಾಮದಲ್ಲಿ ನಡೆಸಲಾಯಿತು.

ಆ. ಪ್ರಯುಕ್ತ2000 ಹಣ್ಣಿನ ಹಾಗೂ ವಿವಿಧ ಜಾತಿಯ ಗಿಡಗಳ ನಾಟಿ ಮಾಡಲಾಯಿತು. ಶೌರ್ಯ ವಿಪತ್ತು ಘಟಕದ ಸದಸ್ಯರು ಗಿಡನಾಟಿ ಕಾರ್ಯದಲ್ಲಿ ಸಹಕಾರ ನೀಡಿದರು.‌ ಕಾರ್ಯಕ್ರಮದ‌ ಬಗ್ಗೆ ಪ್ರಸ್ತಾವಿಕ ಮಾತನಾಡಿದ ಕೃಷಿ ಮೇಲ್ವಿಚಾರಕರು ಕೃಷ್ಣ ಗೌಡ ರವರು, ಧರ್ಮಸ್ಥಳ ದ ಧರ್ಮಾಧಿಕಾರಿ ಡಾ. ಹೆಗ್ಗಡೆಯವರು ಸಂಕಲ್ಪಸಿದಂತೆ ಅರಣ್ಯ ಪ್ರದೇಶದ ಪ್ರಾಣಿಗಳು ಬೆಳೆ ಹಾನಿಯನ್ನು ಮಾಡದಂತೆ ನೋಡಿಕೊಳ್ಳುವರೇ ಕಾಡುಪ್ರದೇಶ ದಲ್ಲಿ ಕಾಡು ಪ್ರಾಣಿಗಳಿಗೆ ಬೇಕಾಗುವ ಹಣ್ಣು ಹಂಪಲು ದೊರೆಯುವಂತೆ ಅರಣ್ಯ ಇಲಾಖೆ ಸಹಕಾರ ಪಡೆದು ಕಾರ್ಯಕ್ರಮ ಆಯೋಜನೆ ಮಾಡಲಾಗಿದೆಯೆಂದರು.

ವೇಣೂರು ವಲಯದ ಉಪ ಅರಣ್ಯ ಅಧಿಕಾರಿ ಸುನಿಲ್ ಕುಮಾರ KS ಮಾತನಾಡಿ, ನಾವು ಈಗ 2000 ಗಿಡ ಕ್ಕೆ ಆಗುವಷ್ಟು ಹೊಂಡ ಹೊಡೆದಿದ್ದು ನಾಟಿ ಮಾಡಲು ಯೋಜನೆಯ ಸಹಕಾರ ನೀಡಿದ್ದು ಬಹಳಷ್ಟು ಅನುಕೂಲ ವಾಗಿದೆ ಎಂದು ನುಡಿದರು. ವಲಯದ ಮೇಲ್ವಿಚಾರಕಿ ಶಾಲಿನಿ ಮಾತನಾಡಿದರು.ಈ ಕಾರ್ಯಕ್ರಮದಲ್ಲಿ ಅರಣ್ಯ ಗಸ್ತು ಅಧಿಕಾರಿ ಈಶ್ವರ್, ಒಕ್ಕೂಟದ ಅಧ್ಯಕ್ಷ ಜಯಶಂಕರ ಹೆಗ್ಡೆ,ವಿಪತ್ತು ಸಂಯೋಜಕ ಗಣೇಶ್,ಹಾಗೂ ಜಯಂತಿ, ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ರೋಪಾ, ಸುನೀತಾ ಹಾಗೂ ವಿಪತ್ತು ತಂಡದ ಸದಸ್ಯರು ಉಪಸ್ಥಿತರಿದ್ದರು.

Related posts

ಬದನಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಶೌರ್ಯ ಇಂಟರ್ ನ್ಯಾಷನಲ್ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಅನುಗ್ರಹ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ನಿಶಾನ್ ಎಚ್ ಪೂಜಾರಿ ಗೆ ಚಿನ್ನದ ಪದಕ

Suddi Udaya

ಸುದ್ದಿ ಉದಯ ವರದಿ ಫಲಶ್ರುತಿ: ಗುರುವಾಯನಕೆರೆ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಇದೀಗ ನಗರ ಪಂಚಾಯತ್ ವತಿಯಿಂದ ಮೋರಿ ಅಳವಡಿಕೆ

Suddi Udaya

ನ.30: ಬಜಿರೆ ಹೊಸಪಟ್ಣ ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಹಾಗೂ ಸತ್ಯನಾರಾಯಣ ಭಜನಾ ಮಂಡಳಿ ಆಶ್ರಯದಲ್ಲಿ ಹೊನಲು ಬೆಳಕಿನ ಪುರುಷರ 60 ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಚ್ಚ ಭಾರತ ಅಭಿಯಾನದ ಕುರಿತು ವಿಶೇಷ ಉಪನ್ಯಾಸ

Suddi Udaya
error: Content is protected !!