24.8 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಚಾರ್ಮಾಡಿಯಲ್ಲಿ ವಿದ್ಯಾರ್ಥಿಗಳು ಹಾಗೂ ಕೆಲವು ಸಾರ್ವಜನಿಕರಿನಿಂದ ಬಸ್ ತಡೆಹಿಡಿದು ಗಲಾಟೆ

ಚಾರ್ಮಾಡಿ: ಬಸ್ ನಿರ್ವಾಹಕ ವಿದ್ಯಾರ್ಥಿಗಳನ್ನು ಬಸ್ ಒಳಗೆ ದೂಡಿ ಹಲ್ಲೆ ನಡೆಸಿದ ಎಂಬ ಕಾರಣಕ್ಕೆ ಬಸ್ಸ ನ್ನು ಚಾರ್ಮಾಡಿ ಬಳಿ ವಿದ್ಯಾರ್ಥಿಗಳು ಹಾಗೂ ಕೆಲವು ಸಾರ್ವಜನಿಕರು ತಡೆಹಿಡಿದು ಗಲಾಟೆ ನಡೆಸಿದ ಘಟನೆ ಜೂ . 17ರಂದು ಸಂಜೆ ನಡೆದಿದೆ.

ಮಂಗಳೂರಿನಿಂದ ಮೂಡಿಗೆರೆಗೆ ಸಂಚರಿಸುವ ಕೆಎಸ್ಸಾರ್ಟಿಸಿ ಬಸ್ ಗೆ ಉಜಿರೆಯಲ್ಲಿ ಹತ್ತುವ ವೇಳೆ ನಿರ್ವಾಹಕ ವಿದ್ಯಾರ್ಥಿಗಳನ್ನು ದೂಡಿ ಹಲ್ಲೆ ನಡೆಸಿರುವುದಾಗಿ ಹೇಳಿ ಅವರು ನಿರ್ವಾಹಕನ ಜತೆ ರಂಪಾಟ ನಡೆಸಿದ್ದಾರೆ. ಬಳಿಕ ಬಸ್ ಚಾರ್ಮಾಡಿ ಚೆಕ್ ಪೋಸ್ಟ್ ಗೆ ತಲುಪುವ ಸಮಯ ಅಲ್ಲಿಯ ಸ್ಥಳೀಯರು ಜಮಾಯಿಸಿ ಬಸ್ಸನ್ನು ತಡೆಹಿಡಿದು ಗಲಾಟೆ ಆರಂಭಿಸಿದರೆನ್ನಲಾಗಿದೆ .

ಈ ಸಮಯ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಲು ಯತ್ನಿಸಿದರು.ಆದರೆ ಈ ಸಂದರ್ಭ ಬಸ್ ನಲ್ಲಿದ್ದ ಪ್ರಯಾಣಿಕ ವಿದ್ಯಾರ್ಥಿಗಳು ಮತ್ತು ಸ್ಥಳೀಯರಲ್ಲಿ ಒಂದಿಷ್ಟು ಮಾತಿನ ಚಕಮಕಿ ನಡೆದು , ಹಲ್ಲೆ ನಡೆಸಲು ಮುಂದಾದ ತಂಡ, ಅವಾಚ್ಯ ಶಬ್ದಗಳಿಂದ ನಿಂದಿಸಿದೆ ಎನ್ನಲಾಗಿದೆ. ಈ ಘಟನೆಯನ್ನು ಸ್ಥಳಿಯರು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದು ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.-

ಪೊಲೀಸರ ಆಗಮನ:

ಘಟನೆಯ ಬಗ್ಗೆ ಮಾಹಿತಿ ಪಡೆದ ಧರ್ಮಸ್ಥಳ ಪಿಎಸ್ ಐ ಅನಿಲ್ ಕುಮಾರ್ ಮತ್ತು ತಂಡದವರು ಸ್ಥಳಕ್ಕೆ ಆಗಮಿಸಿ ಬಸ್ ಸಿಬಂದಿ,ವಿದ್ಯಾರ್ಥಿಗಳು ಹಾಗೂ ಸ್ಥಳೀಯರ ಜತೆ ಮಾತನಾಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು . ಘಟನೆಯಿಂದ ಸುಮಾರು 90 ಕ್ಕಿಂತ ಅಧಿಕ ಮಂದಿ ಪ್ರಯಾಣಿಕರಿದ್ದ ಬಸ್ ಚಾರ್ಮಾಡಿಯಿಂದ ಒಂದೂವರೆ ಗಂಟೆಯಷ್ಟು ಕಾಲ ವಿಳಂಬವಾಗಿ ಮೂಡಿಗೆರೆಯತ್ತ ಪ್ರಯಾಣ ಮುಂದುವರಿಸಿತು. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.

Related posts

ಸಂಕಷ್ಟದಲ್ಲಿರುವ ಹೆಂಚು ಉದ್ಯಮ ಸೂಕ್ತ ಪರಿಹಾರ ಕ್ರಮಕ್ಕಾಗಿ ಪರಿಷತ್ ನಲ್ಲಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಡಿ.13-14: ಬಳಂಜ ಶಾಲೆಗೆ ಅಮೃತ ಮಹೋತ್ಸವ ಸಂಭ್ರಮ

Suddi Udaya

ಅಕ್ರಮ ಮದ್ಯ ಮಾರಾಟ ಅಡ್ಡೆಗೆ ಧರ್ಮಸ್ಥಳ ಪೊಲೀಸರ ದಾಳಿ : ಆರೋಪಿಯ ಬಂಧನ

Suddi Udaya

ರಸ್ತೆಯಲ್ಲೇ ಹರಿದ ಮಳೆ ನೀರು: ಶಾಸಕ ಹರೀಶ್ ಪೂಂಜರಿಂದ ತುರ್ತು ಸ್ಪಂದನೆ , ಚರಂಡಿ ದುರಸ್ತಿ

Suddi Udaya

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಸ್ವಚ್ಛತಾ ಹಿ ಸೇವಾ’ ಸಪ್ತಾಹ ಕಾರ್ಯಕ್ರಮ

Suddi Udaya
error: Content is protected !!