25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲಾ ಮಂತ್ರಿ ಮಂಡಲ ರಚನೆ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮವು ಜೂ .17 ರಂದು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕರಾದ ಶೀನಪ್ಪಗೌಡ ರವರ ವಹಿಸಿಕೊಂಡಿದ್ದರು, ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪುದುವೆಟ್ಟು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಯಶವಂತ ಗೌಡರವರು ವಹಿಸಿಕೊಂಡಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಯುತರು ಶಾಲಾ ಹಂತದಲ್ಲಿ ಮಂತ್ರಿಮಂಡಲದ ರಚನೆಯು ಮಗುವಿನ ಮುಂದಿನ ಭವಿಷ್ಯದಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷ ದೇಶದಲ್ಲಿ ಹೇಗೆ ತನ್ನ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕು ಎನ್ನುವ ಕಲ್ಪನೆ ಮಕ್ಕಳಿಗೆ ತಿಳಿಸಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟರು, ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ದಿನಗಳಲ್ಲಿ ನಡೆದಂತಹ ಶಾಲಾ ಹಂತದ ಮಂತ್ರಿಮಂಡಲದ ರಚನೆಯನ್ನು ಈ ಸಂದರ್ಭದಲ್ಲಿ ಮೆಲುಕು ಹಾಕಿದರು.

ಶಾಲೆಯ ಶಿಕ್ಷಕರಾದ ನಿಶಾಂತ್ ಕುಮಾರ್ ರವರು ನೂತನವಾಗಿ ಆಯ್ಕೆಗೊಂಡ ಎಲ್ಲ ಮಂತ್ರಿಗಳು ಶಾಲೆಯಲ್ಲಿ ನಿರ್ವಹಿಸಬೇಕಾದ ಜವಾಬ್ದಾರಿಗಳನ್ನು ತಿಳಿಸಿದರು. ನೂತನವಾಗಿ ಆಯ್ಕೆಗೊಂಡಂತಹ ಮಂತ್ರಿಗಳಿಗೆ ಶಾಲೆಯ ಮುಖ್ಯ ಶಿಕ್ಷಕರಾದಂತಹ ಶ್ರೀಯುತ ಶೀನಪ್ಪಗೌಡರವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಯುತರು ಮಕ್ಕಳು ತಮ್ಮ ತಮ್ಮ ಖಾತೆಗಳಿಗೆ ಅನುಗುಣವಾಗಿ ಜವಾಬ್ದಾರಿಯುತ ಕೆಲಸ ಕಾರ್ಯಗಳನ್ನು ಮಾಡಿ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಬೇಕು ಎಂದು ತಿಳಿಸಿದರು . ವಿದ್ಯಾರ್ಥಿಗಳ ಪ್ರಾರ್ಥನ ಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಶ್ರೀಮತಿ ಶೀಲಾ ಎನ್ ರವರು ಸ್ವಾಗತಿಸಿ, ಶ್ರೀಮತಿ ತೇಜಾವತಿಯವರು ಧನ್ಯವಾದವಿತ್ತರು. ಕಾರ್ಯಕ್ರಮವನ್ನು ಪವನ್ ಕುಮಾರ್ ನಿರೂಪಿಸಿದರು. ಶಾಲೆಯ ಎಲ್ಲ ಶಿಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು.

Related posts

ಪಾರೆಂಕಿ ಖಾಸಗಿ ವ್ಯಕ್ತಿಯಿಂದ ಸಾರ್ವಜನಿಕ ಕಾಲು ದಾರಿಗೆ ತಡೆಯಾಗಿದ್ದು, ತೆರವುಗೊಳಿಸಲು ಆಗ್ರಹ: ಸಾರ್ವಜನಿಕರು, ಕೃಷಿಕರ ಕುಂದುಕೊರತೆಗಳ ನಿವಾರಣೆಗೆ ಕನ್ನಡ ಸೇನೆ ಕರ್ನಾಟಕ ಹೋರಾಟ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ಅಗಲುವಿಕೆಗೆ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಹರೀಶ್ ಎಳನೀರ್ ಸಂತಾಪ

Suddi Udaya

ಶಿಶಿಲ ಶ್ರೀ ಚಂದ್ರಪುರ ಜಿನ ಮಂದಿರ ದಲ್ಲಿ ಸ್ವರ್ಗಿಯಶ್ರವಣಬೆಳಗೊಳ ಶ್ರೀಗಳಿಗೆ ವಿನಾಯಂಜಲಿ ಅರ್ಪಣೆ

Suddi Udaya

ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಮ್ಯಾಟ್ ಕಬಡ್ಡಿ ಪಂದ್ಯಾಟ : ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಗೆ ಪ್ರಶಸ್ತಿ

Suddi Udaya

ಉಜಿರೆಯ ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿಗೆ ಮತ್ತೊಮ್ಮೆ ಶ್ರೇಷ್ಠತೆ ಸಾಬೀತು

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ತೀರ್ಥಸ್ನಾನ 

Suddi Udaya
error: Content is protected !!