22.9 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಚಾರ್ಮಾಡಿಯಲ್ಲಿ ವಿದ್ಯಾರ್ಥಿಗಳು ಹಾಗೂ ಕೆಲವು ಸಾರ್ವಜನಿಕರಿನಿಂದ ಬಸ್ ತಡೆಹಿಡಿದು ಗಲಾಟೆ

ಚಾರ್ಮಾಡಿ: ಬಸ್ ನಿರ್ವಾಹಕ ವಿದ್ಯಾರ್ಥಿಗಳನ್ನು ಬಸ್ ಒಳಗೆ ದೂಡಿ ಹಲ್ಲೆ ನಡೆಸಿದ ಎಂಬ ಕಾರಣಕ್ಕೆ ಬಸ್ಸ ನ್ನು ಚಾರ್ಮಾಡಿ ಬಳಿ ವಿದ್ಯಾರ್ಥಿಗಳು ಹಾಗೂ ಕೆಲವು ಸಾರ್ವಜನಿಕರು ತಡೆಹಿಡಿದು ಗಲಾಟೆ ನಡೆಸಿದ ಘಟನೆ ಜೂ . 17ರಂದು ಸಂಜೆ ನಡೆದಿದೆ.

ಮಂಗಳೂರಿನಿಂದ ಮೂಡಿಗೆರೆಗೆ ಸಂಚರಿಸುವ ಕೆಎಸ್ಸಾರ್ಟಿಸಿ ಬಸ್ ಗೆ ಉಜಿರೆಯಲ್ಲಿ ಹತ್ತುವ ವೇಳೆ ನಿರ್ವಾಹಕ ವಿದ್ಯಾರ್ಥಿಗಳನ್ನು ದೂಡಿ ಹಲ್ಲೆ ನಡೆಸಿರುವುದಾಗಿ ಹೇಳಿ ಅವರು ನಿರ್ವಾಹಕನ ಜತೆ ರಂಪಾಟ ನಡೆಸಿದ್ದಾರೆ. ಬಳಿಕ ಬಸ್ ಚಾರ್ಮಾಡಿ ಚೆಕ್ ಪೋಸ್ಟ್ ಗೆ ತಲುಪುವ ಸಮಯ ಅಲ್ಲಿಯ ಸ್ಥಳೀಯರು ಜಮಾಯಿಸಿ ಬಸ್ಸನ್ನು ತಡೆಹಿಡಿದು ಗಲಾಟೆ ಆರಂಭಿಸಿದರೆನ್ನಲಾಗಿದೆ .

ಈ ಸಮಯ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಲು ಯತ್ನಿಸಿದರು.ಆದರೆ ಈ ಸಂದರ್ಭ ಬಸ್ ನಲ್ಲಿದ್ದ ಪ್ರಯಾಣಿಕ ವಿದ್ಯಾರ್ಥಿಗಳು ಮತ್ತು ಸ್ಥಳೀಯರಲ್ಲಿ ಒಂದಿಷ್ಟು ಮಾತಿನ ಚಕಮಕಿ ನಡೆದು , ಹಲ್ಲೆ ನಡೆಸಲು ಮುಂದಾದ ತಂಡ, ಅವಾಚ್ಯ ಶಬ್ದಗಳಿಂದ ನಿಂದಿಸಿದೆ ಎನ್ನಲಾಗಿದೆ. ಈ ಘಟನೆಯನ್ನು ಸ್ಥಳಿಯರು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದು ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.-

ಪೊಲೀಸರ ಆಗಮನ:

ಘಟನೆಯ ಬಗ್ಗೆ ಮಾಹಿತಿ ಪಡೆದ ಧರ್ಮಸ್ಥಳ ಪಿಎಸ್ ಐ ಅನಿಲ್ ಕುಮಾರ್ ಮತ್ತು ತಂಡದವರು ಸ್ಥಳಕ್ಕೆ ಆಗಮಿಸಿ ಬಸ್ ಸಿಬಂದಿ,ವಿದ್ಯಾರ್ಥಿಗಳು ಹಾಗೂ ಸ್ಥಳೀಯರ ಜತೆ ಮಾತನಾಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು . ಘಟನೆಯಿಂದ ಸುಮಾರು 90 ಕ್ಕಿಂತ ಅಧಿಕ ಮಂದಿ ಪ್ರಯಾಣಿಕರಿದ್ದ ಬಸ್ ಚಾರ್ಮಾಡಿಯಿಂದ ಒಂದೂವರೆ ಗಂಟೆಯಷ್ಟು ಕಾಲ ವಿಳಂಬವಾಗಿ ಮೂಡಿಗೆರೆಯತ್ತ ಪ್ರಯಾಣ ಮುಂದುವರಿಸಿತು. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.

Related posts

ಫೆ.6 : ನಡ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನ-ರೂ 2ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಬೊಳ್ಳಾಜೆ- ಡೆಂಜೋಲಿ-ಪಡಂಗಡಿ ರಸ್ತೆ ಕಾಮಗಾರಿಗೆ ಚಾಲನೆ

Suddi Udaya

ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನೆಯ ತಾಲೂಕು ಮಟ್ಟದ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಪೋಸ್ಟರ್ ತಯಾರಿಕಾ ಕಾರ್ಯಾಗಾರ

Suddi Udaya

ಉಜಿರೆ ವರ್ತಕರ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಫರಂಗಿಪೇಟೆಯಲ್ಲಿ ದ್ವಿಚಕ್ರ ವಾಹನಕ್ಕೆ ಕಂಟೈನರ್ ಡಿಕ್ಕಿ ಪುತ್ತಿಲ ಗ್ರಾಮದ ಕಳೆಂಜಿಬೈಲು ನಿವಾಸಿ ಇಬ್ರಾಹಿಮ್ ಎನ್ ಮೃತ್ಯು

Suddi Udaya
error: Content is protected !!