24.3 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾ. ಪಂ. ಮಹಿಳಾ ಒಕ್ಕೂಟದ ಮಾಸಿಕ ಸಭೆ

ಚಾರ್ಮಾಡಿ: ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ (ರಿ) ಗ್ರಾಮ ಪಂಚಾಯಿತಿ ಚಾರ್ಮಾಡಿ ಇದರ ಮಾಸಿಕ ಸಭೆಯನ್ನು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಚಂದ್ರಾವತಿ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ನಿಧನರಾದ ಒಕ್ಕೂಟದ ಕಾರ್ಯದರ್ಶಿ ಮತ್ತು ಸ್ವಚ್ಛ ಸಂಕೀರ್ಣ ಘಟಕದ ಮೇಲ್ವಿಚಾರಕಿ ಒಕ್ಕೂಟದ ಸಕ್ರಿಯ ಕೆಲಸಗಳಲ್ಲಿ ಗುರುತಿಸಿಕೊಂಡ ಶ್ರೀಮತಿ ತೇಜಶ್ರೀರವರಿಗೆ ಮೌನ ಪ್ರಾರ್ಥನೆ ಮೂಲಕ ಗೌರವ ನಮನವನ್ನು ಸಲ್ಲಿಸಲಾಯಿತು.

ಈ ಸಭೆಯಲ್ಲಿ ಒಕ್ಕೂಟದಲ್ಲಿ ಕಾರ್ಯನಿರ್ವಹಿಸಲು ವಿವಿಧ ಸಖಿ ಗಳ ಆಯ್ಕೆ ಲೋಕೋಸ್ ಪ್ರಗತಿ, ಸರಕಾರದ ಆದೇಶಗಳ ಕುರಿತು ಚರ್ಚೆ ಸಂಘಟನೆಯಿಂದ ಸಮೃದ್ಧಿ ಅಭಿಯಾನ ಕಾರ್ಯಕ್ರಮದಡಿ ಹೊಸ ಸಂಘಗಳನ್ನು ರಚಿಸುವ ಕುರಿತು ಮಾಹಿತಿ, ಮುಂದಿನ ತಿಂಗಳು ಮಹಾಸಭೆಯನ್ನು ನಡೆಸುವ ದಿನಾಂಕವನ್ನು ನಿಗದಿಪಡಿಸಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಜೊತೆ ಕಾರ್ಯದರ್ಶಿ ಶ್ರೀಮತಿ ಜಯಂತಿ ಕೋಶಾಧಿಕಾರಿ ಪ್ರೇಮ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಶಾರದಾ, ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಎಂಬಿಕೆ ಭವ್ಯರವರು ಕಾರ್ಯಕ್ರಮವನ್ನು ನಿರೂಪಿಸಿ, ರಮ್ಯಾ ರವರು ಧನ್ಯವಾದ ವಿತ್ತರು.

Related posts

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

Suddi Udaya

ಕರುಂ ಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ಭೂಸೇನೆಯಲ್ಲಿ 20ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬಾರ್ಯ ಪಿಲಿಗೂಡು ನಿವಾಸಿ ಹವಾಲ್ದಾರ್ ಜಯಾನಂದ ಪೂಜಾರಿ ಮಾ.31 ರಂದು ಸೇವಾ ನಿವೃತ್ತಿ

Suddi Udaya

ಉಜಿರೆ: ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ಪುತ್ತಿಗೆ ಮಠದ ಪೀಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳರವರ ಭೇಟಿ

Suddi Udaya

ತ್ರೋಬಾಲ್ ಪಂದ್ಯಾಟ: ಕರಂಬಾರು ಶಾಲೆ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಬ್ಲಾಕ್ ಜಾಕ್ ಪ್ರೊಡಕ್ಟ್ ಪಿಚ್ಚಿಂಗ್ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya
error: Content is protected !!