September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾ. ಪಂ. ಮಹಿಳಾ ಒಕ್ಕೂಟದ ಮಾಸಿಕ ಸಭೆ

ಚಾರ್ಮಾಡಿ: ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ (ರಿ) ಗ್ರಾಮ ಪಂಚಾಯಿತಿ ಚಾರ್ಮಾಡಿ ಇದರ ಮಾಸಿಕ ಸಭೆಯನ್ನು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಚಂದ್ರಾವತಿ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ನಿಧನರಾದ ಒಕ್ಕೂಟದ ಕಾರ್ಯದರ್ಶಿ ಮತ್ತು ಸ್ವಚ್ಛ ಸಂಕೀರ್ಣ ಘಟಕದ ಮೇಲ್ವಿಚಾರಕಿ ಒಕ್ಕೂಟದ ಸಕ್ರಿಯ ಕೆಲಸಗಳಲ್ಲಿ ಗುರುತಿಸಿಕೊಂಡ ಶ್ರೀಮತಿ ತೇಜಶ್ರೀರವರಿಗೆ ಮೌನ ಪ್ರಾರ್ಥನೆ ಮೂಲಕ ಗೌರವ ನಮನವನ್ನು ಸಲ್ಲಿಸಲಾಯಿತು.

ಈ ಸಭೆಯಲ್ಲಿ ಒಕ್ಕೂಟದಲ್ಲಿ ಕಾರ್ಯನಿರ್ವಹಿಸಲು ವಿವಿಧ ಸಖಿ ಗಳ ಆಯ್ಕೆ ಲೋಕೋಸ್ ಪ್ರಗತಿ, ಸರಕಾರದ ಆದೇಶಗಳ ಕುರಿತು ಚರ್ಚೆ ಸಂಘಟನೆಯಿಂದ ಸಮೃದ್ಧಿ ಅಭಿಯಾನ ಕಾರ್ಯಕ್ರಮದಡಿ ಹೊಸ ಸಂಘಗಳನ್ನು ರಚಿಸುವ ಕುರಿತು ಮಾಹಿತಿ, ಮುಂದಿನ ತಿಂಗಳು ಮಹಾಸಭೆಯನ್ನು ನಡೆಸುವ ದಿನಾಂಕವನ್ನು ನಿಗದಿಪಡಿಸಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಜೊತೆ ಕಾರ್ಯದರ್ಶಿ ಶ್ರೀಮತಿ ಜಯಂತಿ ಕೋಶಾಧಿಕಾರಿ ಪ್ರೇಮ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಶಾರದಾ, ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಎಂಬಿಕೆ ಭವ್ಯರವರು ಕಾರ್ಯಕ್ರಮವನ್ನು ನಿರೂಪಿಸಿ, ರಮ್ಯಾ ರವರು ಧನ್ಯವಾದ ವಿತ್ತರು.

Related posts

ಉಜಿರೆಯಲ್ಲಿ ರಾಷ್ಟ್ರಪತಿಗಳ ಹೆಸರಿನಲ್ಲಿ 6.20 ಎಕ್ರೆ ಜಮೀನು: ಸರ್ಕಲ್‌ನಿಂದ ಬೆಳಾಲು ಕ್ರಾಸ್ ತನಕ ವಿಸ್ತಾರ-ದಿಶಾಂಕ್ ಆ್ಯಪ್‌ನಲ್ಲಿ ಪತ್ತೆ

Suddi Udaya

ಕೊಡಿಯಾಲಬೈಲು ಶಾಲೆಯಲ್ಲಿ ತಾಲೂಕು ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಬೆಂಗಳೂರು ಟೆಕ್ಸಸ್ ಕಂಪನಿ ಯಿಂದ ಇಂದಬೆಟ್ಟು ಸ.ಹಿ.ಪ್ರಾ. ಶಾಲೆಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಶ್ರೀ ಗೆಜ್ಜೆಗಿರಿ ಮೇಳದ ಐದನೇ ವರ್ಷದ ತಿರುಗಾಟದ ಪ್ರಯುಕ್ತ ಡಿ. ಹರ್ಷೇಂದ್ರ ಕುಮಾರ್ ಧರ್ಮಸ್ಥಳ ಅವರ ಭೇಟಿ

Suddi Udaya

ನಾಳ ಶರನ್ನವರಾತ್ರಿ ಪೂಜೆ ಮತ್ತು ಭಜನೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya
error: Content is protected !!