25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾ. ಪಂ. ಮಹಿಳಾ ಒಕ್ಕೂಟದ ಮಾಸಿಕ ಸಭೆ

ಚಾರ್ಮಾಡಿ: ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ (ರಿ) ಗ್ರಾಮ ಪಂಚಾಯಿತಿ ಚಾರ್ಮಾಡಿ ಇದರ ಮಾಸಿಕ ಸಭೆಯನ್ನು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಚಂದ್ರಾವತಿ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ನಿಧನರಾದ ಒಕ್ಕೂಟದ ಕಾರ್ಯದರ್ಶಿ ಮತ್ತು ಸ್ವಚ್ಛ ಸಂಕೀರ್ಣ ಘಟಕದ ಮೇಲ್ವಿಚಾರಕಿ ಒಕ್ಕೂಟದ ಸಕ್ರಿಯ ಕೆಲಸಗಳಲ್ಲಿ ಗುರುತಿಸಿಕೊಂಡ ಶ್ರೀಮತಿ ತೇಜಶ್ರೀರವರಿಗೆ ಮೌನ ಪ್ರಾರ್ಥನೆ ಮೂಲಕ ಗೌರವ ನಮನವನ್ನು ಸಲ್ಲಿಸಲಾಯಿತು.

ಈ ಸಭೆಯಲ್ಲಿ ಒಕ್ಕೂಟದಲ್ಲಿ ಕಾರ್ಯನಿರ್ವಹಿಸಲು ವಿವಿಧ ಸಖಿ ಗಳ ಆಯ್ಕೆ ಲೋಕೋಸ್ ಪ್ರಗತಿ, ಸರಕಾರದ ಆದೇಶಗಳ ಕುರಿತು ಚರ್ಚೆ ಸಂಘಟನೆಯಿಂದ ಸಮೃದ್ಧಿ ಅಭಿಯಾನ ಕಾರ್ಯಕ್ರಮದಡಿ ಹೊಸ ಸಂಘಗಳನ್ನು ರಚಿಸುವ ಕುರಿತು ಮಾಹಿತಿ, ಮುಂದಿನ ತಿಂಗಳು ಮಹಾಸಭೆಯನ್ನು ನಡೆಸುವ ದಿನಾಂಕವನ್ನು ನಿಗದಿಪಡಿಸಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಜೊತೆ ಕಾರ್ಯದರ್ಶಿ ಶ್ರೀಮತಿ ಜಯಂತಿ ಕೋಶಾಧಿಕಾರಿ ಪ್ರೇಮ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಶಾರದಾ, ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಎಂಬಿಕೆ ಭವ್ಯರವರು ಕಾರ್ಯಕ್ರಮವನ್ನು ನಿರೂಪಿಸಿ, ರಮ್ಯಾ ರವರು ಧನ್ಯವಾದ ವಿತ್ತರು.

Related posts

ಕುಣಿತ ಭಜನಾ ಸ್ಪರ್ಧೆ: ಉಜಿರೆ ಛತ್ರಪತಿ ಶಿವಾಜಿ ಕುಣಿತ ಭಜನಾ ಮಂಡಳಿ ಪ್ರಥಮ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಸಹಕಾರಿ ಕ್ಷೇತ್ರದ ಅಪ್ರತಿಮ ಸಾಧಕ ಪೆರಾಡಿ ಸೊಸೈಟಿ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣರವರಿಗೆ ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ ಪ್ರದಾನ

Suddi Udaya

ಧರ್ಮಸ್ಥಳ: ಬಿಜೆಪಿ ಮಂಡಲದ ನೂತನ ಅಧ್ಯಕ್ಷ ಶ್ರೀನಿವಾಸ್ ರಾವ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಗ್ರಾ.ಪಂ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪ.ಪಂಗಡಕ್ಕೆ ನೀರಿನ ಟ್ಯಾಂಕ್ ಮತ್ತು ವಿಶೇಷಚೇತನರಿಗೆ ವೀಲ್ ಚೇರ್ ವಿತರಣೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ.59 ಲಕ್ಷ ಲಾಭ, ಶೇ.15 ಡಿವಿಡೆಂಟ್ ಘೋಷಣೆ

Suddi Udaya
error: Content is protected !!