28.8 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾ. ಪಂ. ಮಹಿಳಾ ಒಕ್ಕೂಟದ ಮಾಸಿಕ ಸಭೆ

ಚಾರ್ಮಾಡಿ: ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ (ರಿ) ಗ್ರಾಮ ಪಂಚಾಯಿತಿ ಚಾರ್ಮಾಡಿ ಇದರ ಮಾಸಿಕ ಸಭೆಯನ್ನು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಚಂದ್ರಾವತಿ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ನಿಧನರಾದ ಒಕ್ಕೂಟದ ಕಾರ್ಯದರ್ಶಿ ಮತ್ತು ಸ್ವಚ್ಛ ಸಂಕೀರ್ಣ ಘಟಕದ ಮೇಲ್ವಿಚಾರಕಿ ಒಕ್ಕೂಟದ ಸಕ್ರಿಯ ಕೆಲಸಗಳಲ್ಲಿ ಗುರುತಿಸಿಕೊಂಡ ಶ್ರೀಮತಿ ತೇಜಶ್ರೀರವರಿಗೆ ಮೌನ ಪ್ರಾರ್ಥನೆ ಮೂಲಕ ಗೌರವ ನಮನವನ್ನು ಸಲ್ಲಿಸಲಾಯಿತು.

ಈ ಸಭೆಯಲ್ಲಿ ಒಕ್ಕೂಟದಲ್ಲಿ ಕಾರ್ಯನಿರ್ವಹಿಸಲು ವಿವಿಧ ಸಖಿ ಗಳ ಆಯ್ಕೆ ಲೋಕೋಸ್ ಪ್ರಗತಿ, ಸರಕಾರದ ಆದೇಶಗಳ ಕುರಿತು ಚರ್ಚೆ ಸಂಘಟನೆಯಿಂದ ಸಮೃದ್ಧಿ ಅಭಿಯಾನ ಕಾರ್ಯಕ್ರಮದಡಿ ಹೊಸ ಸಂಘಗಳನ್ನು ರಚಿಸುವ ಕುರಿತು ಮಾಹಿತಿ, ಮುಂದಿನ ತಿಂಗಳು ಮಹಾಸಭೆಯನ್ನು ನಡೆಸುವ ದಿನಾಂಕವನ್ನು ನಿಗದಿಪಡಿಸಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಜೊತೆ ಕಾರ್ಯದರ್ಶಿ ಶ್ರೀಮತಿ ಜಯಂತಿ ಕೋಶಾಧಿಕಾರಿ ಪ್ರೇಮ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಶಾರದಾ, ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಎಂಬಿಕೆ ಭವ್ಯರವರು ಕಾರ್ಯಕ್ರಮವನ್ನು ನಿರೂಪಿಸಿ, ರಮ್ಯಾ ರವರು ಧನ್ಯವಾದ ವಿತ್ತರು.

Related posts

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯ ಸಿಮ್ ಕಾರ್ಡ್ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು

Suddi Udaya

ಧರ್ಮಸ್ಥಳ : ಕಲ್ಲೇರಿಯಲ್ಲಿ ಸುನಿಲ್ ರೆಡಿವೇರ್ಸ್ ಶುಭರಾಂಭ

Suddi Udaya

ನಾವೂರು: ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ಸ್ವಚ್ಚತಾ ಆಂದೋಲನ

Suddi Udaya

ಚಿಬಿದ್ರೆ: ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಜಾಯಿನ್ ಜೆಸಿಐ ಅಭಿಯಾನದಲ್ಲಿ ಜೇಸಿಯೇತರ ಸದಸ್ಯರಿಗಾಗಿ ಒರಿಯಂಟೇಷನ್ ತರಬೇತಿ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಚಾರಿ ಆಸ್ಪತ್ರೆ ಸುಮಾರು 25 ವಷ೯ಗಳ ಕಾಲ ವೈದ್ಯರಾಗಿ ಸೇವೆ ಸಲ್ಲಿಸಿದ್ದ ಡಾ.ನಾರಾಯಣ ಪ್ರಭು ನಿಧನ

Suddi Udaya
error: Content is protected !!