32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾ. ಪಂ. ಮಹಿಳಾ ಒಕ್ಕೂಟದ ಮಾಸಿಕ ಸಭೆ

ಚಾರ್ಮಾಡಿ: ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ (ರಿ) ಗ್ರಾಮ ಪಂಚಾಯಿತಿ ಚಾರ್ಮಾಡಿ ಇದರ ಮಾಸಿಕ ಸಭೆಯನ್ನು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಚಂದ್ರಾವತಿ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ನಿಧನರಾದ ಒಕ್ಕೂಟದ ಕಾರ್ಯದರ್ಶಿ ಮತ್ತು ಸ್ವಚ್ಛ ಸಂಕೀರ್ಣ ಘಟಕದ ಮೇಲ್ವಿಚಾರಕಿ ಒಕ್ಕೂಟದ ಸಕ್ರಿಯ ಕೆಲಸಗಳಲ್ಲಿ ಗುರುತಿಸಿಕೊಂಡ ಶ್ರೀಮತಿ ತೇಜಶ್ರೀರವರಿಗೆ ಮೌನ ಪ್ರಾರ್ಥನೆ ಮೂಲಕ ಗೌರವ ನಮನವನ್ನು ಸಲ್ಲಿಸಲಾಯಿತು.

ಈ ಸಭೆಯಲ್ಲಿ ಒಕ್ಕೂಟದಲ್ಲಿ ಕಾರ್ಯನಿರ್ವಹಿಸಲು ವಿವಿಧ ಸಖಿ ಗಳ ಆಯ್ಕೆ ಲೋಕೋಸ್ ಪ್ರಗತಿ, ಸರಕಾರದ ಆದೇಶಗಳ ಕುರಿತು ಚರ್ಚೆ ಸಂಘಟನೆಯಿಂದ ಸಮೃದ್ಧಿ ಅಭಿಯಾನ ಕಾರ್ಯಕ್ರಮದಡಿ ಹೊಸ ಸಂಘಗಳನ್ನು ರಚಿಸುವ ಕುರಿತು ಮಾಹಿತಿ, ಮುಂದಿನ ತಿಂಗಳು ಮಹಾಸಭೆಯನ್ನು ನಡೆಸುವ ದಿನಾಂಕವನ್ನು ನಿಗದಿಪಡಿಸಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಜೊತೆ ಕಾರ್ಯದರ್ಶಿ ಶ್ರೀಮತಿ ಜಯಂತಿ ಕೋಶಾಧಿಕಾರಿ ಪ್ರೇಮ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಶಾರದಾ, ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಎಂಬಿಕೆ ಭವ್ಯರವರು ಕಾರ್ಯಕ್ರಮವನ್ನು ನಿರೂಪಿಸಿ, ರಮ್ಯಾ ರವರು ಧನ್ಯವಾದ ವಿತ್ತರು.

Related posts

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ

Suddi Udaya

ಫೆ.12-16: ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಆರಾಟ್ ಉತ್ಸವ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜ:ತಾಲ್ಲೂಕಿನಾದ್ಯಾಂತ ಸಂಘಟನಾತ್ಮಕ ಪ್ರವಾಸ – 65ಕ್ಕೂ ಅಧಿಕಶಕ್ತಿ ಕೇಂದ್ರಗಳಿಗೆ ಭೇಟಿ ನೀಡಿ, ಕಾಯ೯ಕತ೯ರ ಸಭೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಪುದುವೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ರೆಫ್ರಿಜರೇಷನ್ ಮತ್ತು ಏರ್‌ ಕಂಡೀಷನಿಂಗ್ ತರಬೇತಿ ಸಮಾರೋಪ

Suddi Udaya
error: Content is protected !!