23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾ. ಪಂ. ಮಹಿಳಾ ಒಕ್ಕೂಟದ ಮಾಸಿಕ ಸಭೆ

ಚಾರ್ಮಾಡಿ: ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ (ರಿ) ಗ್ರಾಮ ಪಂಚಾಯಿತಿ ಚಾರ್ಮಾಡಿ ಇದರ ಮಾಸಿಕ ಸಭೆಯನ್ನು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಚಂದ್ರಾವತಿ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ನಿಧನರಾದ ಒಕ್ಕೂಟದ ಕಾರ್ಯದರ್ಶಿ ಮತ್ತು ಸ್ವಚ್ಛ ಸಂಕೀರ್ಣ ಘಟಕದ ಮೇಲ್ವಿಚಾರಕಿ ಒಕ್ಕೂಟದ ಸಕ್ರಿಯ ಕೆಲಸಗಳಲ್ಲಿ ಗುರುತಿಸಿಕೊಂಡ ಶ್ರೀಮತಿ ತೇಜಶ್ರೀರವರಿಗೆ ಮೌನ ಪ್ರಾರ್ಥನೆ ಮೂಲಕ ಗೌರವ ನಮನವನ್ನು ಸಲ್ಲಿಸಲಾಯಿತು.

ಈ ಸಭೆಯಲ್ಲಿ ಒಕ್ಕೂಟದಲ್ಲಿ ಕಾರ್ಯನಿರ್ವಹಿಸಲು ವಿವಿಧ ಸಖಿ ಗಳ ಆಯ್ಕೆ ಲೋಕೋಸ್ ಪ್ರಗತಿ, ಸರಕಾರದ ಆದೇಶಗಳ ಕುರಿತು ಚರ್ಚೆ ಸಂಘಟನೆಯಿಂದ ಸಮೃದ್ಧಿ ಅಭಿಯಾನ ಕಾರ್ಯಕ್ರಮದಡಿ ಹೊಸ ಸಂಘಗಳನ್ನು ರಚಿಸುವ ಕುರಿತು ಮಾಹಿತಿ, ಮುಂದಿನ ತಿಂಗಳು ಮಹಾಸಭೆಯನ್ನು ನಡೆಸುವ ದಿನಾಂಕವನ್ನು ನಿಗದಿಪಡಿಸಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಜೊತೆ ಕಾರ್ಯದರ್ಶಿ ಶ್ರೀಮತಿ ಜಯಂತಿ ಕೋಶಾಧಿಕಾರಿ ಪ್ರೇಮ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಶಾರದಾ, ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಎಂಬಿಕೆ ಭವ್ಯರವರು ಕಾರ್ಯಕ್ರಮವನ್ನು ನಿರೂಪಿಸಿ, ರಮ್ಯಾ ರವರು ಧನ್ಯವಾದ ವಿತ್ತರು.

Related posts

ರುಡ್ ಸೆಟ್ ಶಿಬಿರಾರ್ಥಿಗಳಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಶಿಲ್ಪಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿಗೆ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ಆಯ್ಕೆ

Suddi Udaya

ಬಂದಾರು: ಮುರ್ತಾಜೆಯಲ್ಲಿ ರಸ್ತೆ ಕುಸಿತ; ಸಂಪರ್ಕ ಕಡಿತ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

Suddi Udaya

ಮರೋಡಿ:ಶ್ರೀ ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ಕ್ರೀಡಾಂಗಣ ಉದ್ಘಾಟನೆ

Suddi Udaya
error: Content is protected !!