22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾ. ಪಂ. ಮಹಿಳಾ ಒಕ್ಕೂಟದ ಮಾಸಿಕ ಸಭೆ

ಚಾರ್ಮಾಡಿ: ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ (ರಿ) ಗ್ರಾಮ ಪಂಚಾಯಿತಿ ಚಾರ್ಮಾಡಿ ಇದರ ಮಾಸಿಕ ಸಭೆಯನ್ನು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಚಂದ್ರಾವತಿ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ನಿಧನರಾದ ಒಕ್ಕೂಟದ ಕಾರ್ಯದರ್ಶಿ ಮತ್ತು ಸ್ವಚ್ಛ ಸಂಕೀರ್ಣ ಘಟಕದ ಮೇಲ್ವಿಚಾರಕಿ ಒಕ್ಕೂಟದ ಸಕ್ರಿಯ ಕೆಲಸಗಳಲ್ಲಿ ಗುರುತಿಸಿಕೊಂಡ ಶ್ರೀಮತಿ ತೇಜಶ್ರೀರವರಿಗೆ ಮೌನ ಪ್ರಾರ್ಥನೆ ಮೂಲಕ ಗೌರವ ನಮನವನ್ನು ಸಲ್ಲಿಸಲಾಯಿತು.

ಈ ಸಭೆಯಲ್ಲಿ ಒಕ್ಕೂಟದಲ್ಲಿ ಕಾರ್ಯನಿರ್ವಹಿಸಲು ವಿವಿಧ ಸಖಿ ಗಳ ಆಯ್ಕೆ ಲೋಕೋಸ್ ಪ್ರಗತಿ, ಸರಕಾರದ ಆದೇಶಗಳ ಕುರಿತು ಚರ್ಚೆ ಸಂಘಟನೆಯಿಂದ ಸಮೃದ್ಧಿ ಅಭಿಯಾನ ಕಾರ್ಯಕ್ರಮದಡಿ ಹೊಸ ಸಂಘಗಳನ್ನು ರಚಿಸುವ ಕುರಿತು ಮಾಹಿತಿ, ಮುಂದಿನ ತಿಂಗಳು ಮಹಾಸಭೆಯನ್ನು ನಡೆಸುವ ದಿನಾಂಕವನ್ನು ನಿಗದಿಪಡಿಸಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಜೊತೆ ಕಾರ್ಯದರ್ಶಿ ಶ್ರೀಮತಿ ಜಯಂತಿ ಕೋಶಾಧಿಕಾರಿ ಪ್ರೇಮ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಶಾರದಾ, ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಎಂಬಿಕೆ ಭವ್ಯರವರು ಕಾರ್ಯಕ್ರಮವನ್ನು ನಿರೂಪಿಸಿ, ರಮ್ಯಾ ರವರು ಧನ್ಯವಾದ ವಿತ್ತರು.

Related posts

ನಾಳೆ ವಿದ್ಯುತ್‌ ನಿಲುಗಡೆ

Suddi Udaya

ರಕ್ತೇಶ್ವರಿ ಪದವು ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನಾಗವೇಣಿ ಕೆ.ಎಸ್. ರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಫೆ. 28- 29: ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪ್ರಯಾಗ್‌ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದಿಂದ ಚಿಕಿತ್ಸಾ ನೆರವು

Suddi Udaya

ಬೆಳ್ತಂಗಡಿ ವಕೀಲರ ಸಂಘಕ್ಕೆ ನ್ಯಾಯಮೂರ್ತಿ ರಾಜೇಶ್‌ ರೈ ಕೈರಂಗಳ ಭೇಟಿ

Suddi Udaya
error: Content is protected !!