23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳಾಲು ಪ್ರೌಢಶಾಲೆ ಪೋಷಕರ ಸಮಾವೇಶ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ 2023 – 24ನೇ ಶೈಕ್ಷಣಿಕ ವರ್ಷದ ಪೋಷಕರ ಸಮಾವೇಶವು ಜರಗಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಉಜಿರೆ ಶ್ರೀಧ. ಮ. ಪಿ. ಯು. ವಸತಿ ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ರವರು ಮಾತನಾಡುತ್ತಾ, ಮಕ್ಕಳ ಬೇಡಿಕೆಗಳನ್ನೆಲ್ಲಾ ಪೂರೈಸುವುದು ಶೈಕ್ಷಣಿಕ ಪ್ರೋತ್ಸಾಹವಲ್ಲ. ನಾವು ಹೊಂದುವ ವಸ್ತುಗಳಿಂದ ಸುಖ ಸಿಗಲಾರದು. ಪರಸ್ಪರ ಮನುಷ್ಯ ಸಂಬಂಧಗಳನ್ನು ಬೆಸೆಯುವುದರಲ್ಲಿ ಸುಖ ಲಭ್ಯವಾಗುತ್ತದೆ. ಅದಕ್ಕಾಗಿ ಶಾಲೆಗಳು ಅಂಕ ತೆಗೆಯುವ ಕೇಂದ್ರವಾಗದೆ ಸಂಸ್ಕಾರ ಬೆಳೆಸುವ ಕೇಂದ್ರವಾಗಬೇಕು ಎಂದು ಹೇಳಿದರು. ಸಭೆಯ ಅಧ್ಯಕ್ಷತೆಯನ್ನು ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಸುಲೈಮಾನ್ ಭೀಮಂಡೆಯವರು ವಹಿಸಿದ್ದರು. ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರು ಶೈಕ್ಷಣಿಕ ಮಾಹಿತಿಗಳೊಂದಿಗೆ ಪ್ರಸ್ತಾವನೆ ಗೈದರು.

ಈ ಸಂದರ್ಭದಲ್ಲಿ ಶಿಕ್ಷಕ ರಕ್ಷಕ ಸಂಘಕ್ಕೆ ಶೈಕ್ಷಣಿಕ ವರ್ಷದ ನೂತನ ಅಧ್ಯಕ್ಷ ಪದಾಧಿಕಾರಿಗಳ ಆಯ್ಕೆ ಜರಗಿತು. ನೂತನ ಅಧ್ಯಕ್ಷರಾಗಿ ಶೇಖರ ಗೌಡ ಕೊಲ್ಲಿಮಾರ್ ರವರು ಆಯ್ಕೆಯಾದರು. ಚುನಾವಣಾ ಪ್ರಕ್ರಿಯೆಯನ್ನು ರವಿಚಂದ್ರ ಜೈನ್ ರವರು ನೆರವೇರಿಸಿದರು. ಸಮಾರಂಭದ ವೇದಿಕೆಯಲ್ಲಿ ಶಿಕ್ಷಕರಾದ ಕೃಷ್ಣಾನಂದ, ಗಣೇಶ್ವರ ಎಂ. , ಶ್ರೀಮತಿ ಚಿತ್ರಾವತಿಯವರು ಉಪಸ್ಥಿತರಿದ್ದರು. ಶ್ರೀಮತಿ ವಾರಿಜ ಎಸ್ ಗೌಡರು ವಾರ್ಷಿಕ ವರದಿ ವಾಚನ ಮಾಡಿ, ಜಗದೀಶ್ ರವರು ಸ್ವಾಗತಿಸಿದರು. ರಾಜಶ್ರೀ ವಂದಿಸಿ, ಸುಮನ್ ಯು ಎಸ್ ರವರು ಕಾರ್ಯಕ್ರಮ ನಿರೂಪಿಸಿದರು.

Related posts

ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ವಿಶೇಷ ಕೌಶಲ್ಯ ತರಬೇತಿ “ಐಸ್ ಬ್ರೇಕಿಂಗ್ ಸೆಷನ್” ಕಾರ್ಯಾಗಾರ

Suddi Udaya

ಬೆಳ್ತಂಗಡಿ : ವಿಪರೀತ ಮಳೆಯಾಗುತ್ತಿರುವ ಕಾರಣ ಈ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ

Suddi Udaya

ಕನಾ೯ಟಕ ಸಂಗೀತ ನೃತ್ಯ ಅಕಾಡೆಮಿ ನೂತನ ಅಧ್ಯಕ್ಷರಾಗಿ ಡಾ. ಕೃಪಾ ಫಡಕೆ ನೇಮಕ

Suddi Udaya

ಬಾರ್ಯ ಪ್ಯಾಕ್ಸ್ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ದಿಗ್ವಿಜಯ

Suddi Udaya

ಕರಾಟೆ ಪಂದ್ಯಾಟ: ಬಂದಾರು ಬೈಪಾಡಿಯ ಸುಮುಖ ಪಿ ಹೊಳ್ಳ ಹಾಗೂ ಸೃಷ್ಟಿ ಪಿ ಹೊಳ್ಳ ರಿಗೆ ಬೆಳ್ಳಿ ಪದಕ

Suddi Udaya

ನವದೆಹಲಿಯ ಗಣರಾಜ್ಯೋತ್ಸವ ಪೆರೇಡ್ ಗೆ ಮೂಡುಕೋಡಿಯ ನಿಷ್ಮಾ ಪೂಜಾರಿ ಆಯ್ಕೆ

Suddi Udaya
error: Content is protected !!