September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳಾಲು ಪ್ರೌಢಶಾಲೆ ಪೋಷಕರ ಸಮಾವೇಶ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ 2023 – 24ನೇ ಶೈಕ್ಷಣಿಕ ವರ್ಷದ ಪೋಷಕರ ಸಮಾವೇಶವು ಜರಗಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಉಜಿರೆ ಶ್ರೀಧ. ಮ. ಪಿ. ಯು. ವಸತಿ ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ರವರು ಮಾತನಾಡುತ್ತಾ, ಮಕ್ಕಳ ಬೇಡಿಕೆಗಳನ್ನೆಲ್ಲಾ ಪೂರೈಸುವುದು ಶೈಕ್ಷಣಿಕ ಪ್ರೋತ್ಸಾಹವಲ್ಲ. ನಾವು ಹೊಂದುವ ವಸ್ತುಗಳಿಂದ ಸುಖ ಸಿಗಲಾರದು. ಪರಸ್ಪರ ಮನುಷ್ಯ ಸಂಬಂಧಗಳನ್ನು ಬೆಸೆಯುವುದರಲ್ಲಿ ಸುಖ ಲಭ್ಯವಾಗುತ್ತದೆ. ಅದಕ್ಕಾಗಿ ಶಾಲೆಗಳು ಅಂಕ ತೆಗೆಯುವ ಕೇಂದ್ರವಾಗದೆ ಸಂಸ್ಕಾರ ಬೆಳೆಸುವ ಕೇಂದ್ರವಾಗಬೇಕು ಎಂದು ಹೇಳಿದರು. ಸಭೆಯ ಅಧ್ಯಕ್ಷತೆಯನ್ನು ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಸುಲೈಮಾನ್ ಭೀಮಂಡೆಯವರು ವಹಿಸಿದ್ದರು. ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರು ಶೈಕ್ಷಣಿಕ ಮಾಹಿತಿಗಳೊಂದಿಗೆ ಪ್ರಸ್ತಾವನೆ ಗೈದರು.

ಈ ಸಂದರ್ಭದಲ್ಲಿ ಶಿಕ್ಷಕ ರಕ್ಷಕ ಸಂಘಕ್ಕೆ ಶೈಕ್ಷಣಿಕ ವರ್ಷದ ನೂತನ ಅಧ್ಯಕ್ಷ ಪದಾಧಿಕಾರಿಗಳ ಆಯ್ಕೆ ಜರಗಿತು. ನೂತನ ಅಧ್ಯಕ್ಷರಾಗಿ ಶೇಖರ ಗೌಡ ಕೊಲ್ಲಿಮಾರ್ ರವರು ಆಯ್ಕೆಯಾದರು. ಚುನಾವಣಾ ಪ್ರಕ್ರಿಯೆಯನ್ನು ರವಿಚಂದ್ರ ಜೈನ್ ರವರು ನೆರವೇರಿಸಿದರು. ಸಮಾರಂಭದ ವೇದಿಕೆಯಲ್ಲಿ ಶಿಕ್ಷಕರಾದ ಕೃಷ್ಣಾನಂದ, ಗಣೇಶ್ವರ ಎಂ. , ಶ್ರೀಮತಿ ಚಿತ್ರಾವತಿಯವರು ಉಪಸ್ಥಿತರಿದ್ದರು. ಶ್ರೀಮತಿ ವಾರಿಜ ಎಸ್ ಗೌಡರು ವಾರ್ಷಿಕ ವರದಿ ವಾಚನ ಮಾಡಿ, ಜಗದೀಶ್ ರವರು ಸ್ವಾಗತಿಸಿದರು. ರಾಜಶ್ರೀ ವಂದಿಸಿ, ಸುಮನ್ ಯು ಎಸ್ ರವರು ಕಾರ್ಯಕ್ರಮ ನಿರೂಪಿಸಿದರು.

Related posts

ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಹಾಗೂ ಡಾ. ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್‌ ಸಹಯೋಗದಲ್ಲಿ ಕುಮಾರಧಾರದ ಪರಿಸರದಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಕನ್ಯಾಡಿ ಶ್ರೀಗಳಿಂದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ: ಕನ್ಯಾಡಿ ಶ್ರೀರಾಮ‌ಕ್ಷೇತ್ರದ ಅಯೋಧ್ಯೆ ಶಾಖಾಮಠ ಆಶ್ರಮ ನಿರ್ಮಾಣದ ಬಗ್ಗೆ ವಿಚಾರ ವಿಮರ್ಶೆ

Suddi Udaya

ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya

ಶಿಶಿಲ: ಮತ್ಸ್ಯತೀರ್ಥ ಮನೆ ನಿವಾಸಿ ಪುರುಷೋತ್ತಮ ರಾವ್ ನಿಧನ

Suddi Udaya

ತೋಟತ್ತಾಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸ್ವಜಾತಿ ಬಾಂಧವರ ವಾರ್ಷಿಕ ಕ್ರೀಡಾಕೂಟ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನ ಡಾ. ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ

Suddi Udaya
error: Content is protected !!