25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆರ್ಥಿಕ ಸಾಕ್ಷರತೆ ಕಾರ್ಯಕ್ರಮ

ಉಜಿರೆ: ಕೇವಲ ಅಂಕಗಳಿಂದ ಆದಾಯ ಬರುವುದಿಲ್ಲ ಜೊತೆಗೆ ಜೀವನ ಕೌಶಲ್ಯವಿದ್ದರೆ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಅದು ಸ್ವ ಉದ್ಯೋಗ ಇರಬಹುದು ಅಥವಾ ಯಾವುದೇ ಇತರ ಉದ್ಯೋಗವಿರಬಹುದು, ವಿದ್ಯಾರ್ಥಿನಿಯರು ಹಣದ ಉಳಿತಾಯ ಮಾಡಿದರೆ ಮಾಡಿದರೆ ಮಾತ್ರ ಸಮಾಜದಲ್ಲಿ ಉತ್ತಮ ರೀತಿಯಲ್ಲಿ ಜೀವನ ನಿರ್ವಹಣೆ ಮಾಡಬಹುದು ಅದಕ್ಕಾಗಿ ಹಣವನ್ನು ಯಾವ ಯಾವ ರೀತಿಯಲ್ಲಿ ಉಳಿತಾಯ ಮಾಡಬೇಕು ಹಣವನ್ನು ಹೇಗೆ, ಎಲ್ಲಿ, ಯಾವಾಗೆಲ್ಲಾ ಉಳಿತಾಯ ಮಾಡಬೇಕು ಮುಂತಾದ ಹಲವಾರು ವಿಷಯಗಳ ಕುರಿತು ಬೆಳ್ತಂಗಡಿ ಆರ್ಥಿಕ ಸಾಕ್ಷರತಾ ಕೇಂದ್ರದ ಸಂಚಾಲಕರಾದ ಶ್ರೀಮತಿ ಉಷಾ ನಾಯಕ್ ಇವರು ಜೂ. 16 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ ಉಜಿರೆಯಲ್ಲಿ ನಡೆದ ಆರ್ಥಿಕ ಸಾಕ್ಷರತೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ದೇಶವು ಆರ್ಥಿಕವಾಗಿ ಸದೃಢವಾಗಿ ಬೆಳೆಯಲು ಪ್ರತಿಯೊಬ್ಬ ಪ್ರಜೆಯೂ ದುಡಿಯುವವರಾಗಬೇಕು, ಹಾಗೂ ದೇಶದ ಆರ್ಥಿಕ ಬೆಳವಣಿಗೆಗೆ ಸಹಾಯ ನೀಡುವುದಾಗಿ ಪ್ರತಿಜ್ಞೆ ಮಾಡಬೇಕು ಎಂದು ಹೇಳಿದರು. ಜೊತೆಗೆ ವಿಮಾ ಯೋಜನೆ, ಸುಕನ್ಯಾ ಸಮೃದ್ಧಿ ಯೋಜನೆ, ಮುದ್ರಾ ಯೋಜನೆ, ಆರ್ ಡಿ ಹಾಗೂ ಅಟಲ್ ಪೆನ್ಷನ್ ಯೋಜನೆ ಮುಂತಾದ ಹಲವಾರು ವಿಷಯಗಳ ಕುರಿತು ಮಾಹಿತಿ ನೀಡಿದರು.

ವೇದಿಕೆಯಲ್ಲಿ ಪ್ರಾಂಶುಪಾಲ ವಿ ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು ಬೋಧಕ ಬೋಧಕೇತರ ಸಿಬ್ಬಂದಿಗಳು ಸೇರಿದಂತೆ ಎಲ್ಲಾ ವಿದ್ಯಾರ್ಥಿನಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಕು ಸಮೀಕ್ಷಾ ಕಾರ್ಯಕ್ರಮ ನಿರೂಪಿಸಿರು.

Related posts

ಕಳೆಂಜ–ಶಿಶಿಲ ಗ್ರಾಮದ ಸರ್ವೇ ನಂ.309ರ ಕೃಷಿ ಭೂಮಿ ಸಮಸ್ಯೆ: ಜಿಲ್ಲಾಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳೊಂದಿಗೆ ಚರ್ಚೆ -ಶಾಸಕ ಹರೀಶ್ ಪೂಂಜ

Suddi Udaya

ಇಂದಬೆಟ್ಟಿನಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

Suddi Udaya

ಫೇಸ್‌ಬುಕ್ ಜಾಲತಾಣದಲ್ಲಿ ಮಹಿಳೆಗೆ ಚಾರಿತ್ರ್ಯಕ್ಕೆ ಧಕ್ಕೆಯಾಗುವ ಬರಹ ಬೆದರಿಕೆ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮುಂಡಾಜೆ ಕೆ.ಎನ್. ಭಟ್ ಶಿರಾಡಿಪಾಲ್ ಅವರ ಶತಮಾನೋತ್ಸವದ ಪ್ರಯುಕ್ತ ಶತನಮನ ಶತಸನ್ಮಾನ ಸರಣಿ ಕಾರ್ಯಕ್ರಮ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಆರ್ ಟಿ ಸಿ ಗೆ ಆಧಾರ್ ಜೋಡಣಾ ಕಾರ್ಯಕ್ರಮ: ತಹಸೀಲ್ದಾರ್ ಪೃಥ್ವಿ ಸಾನಿಕಾಂ ಭೇಟಿ, ಪರಿಶೀಲನೆ

Suddi Udaya

ಪ್ರಾಥಮಿಕ ಶಾಲೆಗಳ ಕೊಠಡಿ ನಿರ್ಮಾಣಕ್ಕೆ ಅನುದಾನ ಮತ್ತು ತಾಲೂಕಿನ ಮೂರು ಪ್ರಾಥಮಿಕ ಶಾಲೆಗಳನ್ನು ಕೆಪಿಎಸ್‌ ಶಾಲೆಯಾಗಿ ಮೇಲ್ದರ್ಜೆಗೇರಿಸಲು ಶಿಕ್ಷಣ ಸಚಿವರಿಗೆ ಮನವಿ

Suddi Udaya
error: Content is protected !!